
ವಿಜಯಪುರ, (ಜ.08): ಪರಿಹಾರದ ಹಣ ಸಂತ್ರಸ್ತರ ಬಳಿ ಲಂಚಕ್ಕೆ ಬಾಯಿ ತೆರೆದಿದ್ದ ರೆವಿನ್ಯೂ ಇನ್ಸ್ಪೆಕ್ಟರ್ ಭ್ರಷ್ಟಾಚಾರ ನಿಗ್ರಹ ದಳ (ACB) ಬಲೆಗೆ ಬಿದ್ದಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದ ವಿಜಯಪುರ ಜಿಲ್ಲೆಯ ಇಂಡಿಯ ರೆವಿನ್ಯೂ ಇನ್ಸ್ಪೆಕ್ಟರ್ ಬಸವರಾಜ ತೇಲಿ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಇವರು ಮಹಾಂತೇಶ ಅಗಸರ ಎಂಬ ರೈತನಿಂದ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ವಿಜಯಪುರ:ಆರ್ಟಿಒ ಕಚೇರಿ ಮೇಲೆ ಎಸಿಬಿ ದಾಳಿ, 2.5 ಲಕ್ಷ ನಗದು ವಶ
ಎಸಿಬಿ ಡಿವೈಎಸ್ಪಿ ವೇಣುಗೋಪಾಲ ಅವರ ಮಾರ್ಗದರ್ಶನದ ಮೇರೆಗೆ ಸಿಪಿಐಗಳಾದ ಶಿವಶಂಕರ ಗಣಾಚಾರಿ, ಸಚಿನ ಚಲವಾದಿ ಹಾಗೂ ಸಿಬ್ಬಂದಿ ದಾಳಿ ನಡೆಸಿದೆ.
ಘಟನೆ ಹಿನ್ನೆಲೆ...?
ರೈತ ಮಹಾಂತೇಶ ಜಮೀನಿನಲ್ಲಿ ಕೃಷ್ಣಾ ಭಾಗ್ಯ ಜಲನಿಗಮದ (KBJNL) ಕಾಲುವೆ ಹಾದು ಹೋಗಿತ್ತು. ಈ ಹಿನ್ನೆಲೆಯಲ್ಲಿ ಕಾಲುವೆ ಪರಿಹಾರ ಅಂತ 2 ಲಕ್ಷ 85ಸಾವಿರ ರೂಪಾಯಿ ಬಂದಿತ್ತು.
ಈ ಪರಿಹಾರದ ಚೆಕ್ ನೀಡಲು 4 ಸಾವಿರ ರೂ. ಲಂಚ ಬೇಡಿಕೆ ಇಟ್ಟಿದ್ದಾರೆ. ಅದರಂತೆ ಇಂದು (ಬುಧವಾರ) ಇಂಡಿ ಪಟ್ಟಣದಲ್ಲಿರುವ ವಿಶೇಷ ಭೂ ಸ್ವಾಧಿನಾಧಿಕಾರಿ(SLO) ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ದಾಳಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ