
ಬೆಂಗಳೂರು(ಏ.17): ಕ್ರಿಕೆಟ್ ಸಾಮಗ್ರಿಗಳಲ್ಲಿ ಮಾದಕ ವಸ್ತುಗಳನ್ನಿಟ್ಟು ಗಲ್ಫ್ ದೇಶಗಳಿಗೆ ಕೊರಿಯರ್ ಮೂಲಕ ಪೂರೈಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೇಂದ್ರ ಮಾದಕ ನಿಯಂತ್ರಣ ದಳದ(ಎನ್ಸಿಬಿ) ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ.
ಕಾಸರಗೋಡು ನಿವಾಸಿ ಎಸ್.ನಶಾಂತ್ ಬಂಧಿತ. ಆರೋಪಿಯಿಂದ 20 ಲಕ್ಷ ಮೌಲ್ಯದ ಮಾದಕ ವಸ್ತು ಅಂಪೇಟಮೈನ್ ಜಪ್ತಿ ಮಾಡಲಾಗಿದೆ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಕೇರಳದಿಂದ ಬಸ್ಸಿನ ಲಗೇಜ್ ಬಾಕ್ಸಲ್ಲಿ ಗಾಂಜಾ ಸಾಗಾಟ
ಆರೋಪಿ ಮಾದಕ ವಸ್ತು ಮಾರಾಟ ಮಾಡುವುದನ್ನೇ ದಂಧೆಯನ್ನಾಗಿಸಿಕೊಂಡಿದ್ದ. ಬೆಂಗಳೂರಿನಿಂದ ದೋಹಾ ಮತ್ತು ಕತಾರ್ ದೇಶಕ್ಕೆ ಮಾದಕ ವಸ್ತುವನ್ನು ಕುಝಿಯಲ್ ಎಂಬ ಹೆಸರಿಗೆ ಕೊರಿಯರ್ ಕಳಿಸುತ್ತಿದ್ದ. ಯಾರಿಗೂ ಅನುಮಾನ ಬಾರದಂತೆ ಕ್ರಿಕೆಟಿಗರು ಬಳಸುವ ಕೈಗವಸು ಹಾಗೂ ಸುರಕ್ಷ ಕವಚದಲ್ಲಿ ಮಾದಕ ವಸ್ತುವನ್ನಿಟ್ಟು ಪೂರೈಕೆ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕ ಬೇಕಿದೆ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ