ಬಟ್ಟೆ ವ್ಯಾಪಾರಿಯಿಂದ 37 ಲಕ್ಷ ರು. ಸುಲಿಗೆ ಮಾಡಿದ್ದವನ ಬಂಧನ

Kannadaprabha News   | Asianet News
Published : Nov 20, 2020, 08:06 AM IST
ಬಟ್ಟೆ ವ್ಯಾಪಾರಿಯಿಂದ 37 ಲಕ್ಷ ರು. ಸುಲಿಗೆ ಮಾಡಿದ್ದವನ ಬಂಧನ

ಸಾರಾಂಶ

ಆರೋಪಿಯಿಂದ 30.54 ಲಕ್ಷ ನಗದು ಹಾಗೂ ದ್ವಿಚಕ್ರ ವಾಹನ ಜಪ್ತಿ| ಸಿಸಿಟಿವಿ ಕ್ಯಾಮೆರಾ ಮಾಹಿತಿ ಆಧರಿಸಿ ತನಿಖೆ ಕೈಗೆತ್ತಿಕೊಂಡ ಪೊಲೀಸರು| ತಲೆಮರೆಸಿಕೊಂಡಿರುವ ಮತ್ತೊಬ್ಬನಿಗೆ ಜಾಲ ಬೀಸಿದ ಪೊಲೀಸರು| 

ಬೆಂಗಳೂರು(ನ.20): ಇತ್ತೀಚಿಗೆ ಬಟ್ಟೆ ವ್ಯಾಪಾರಿಯೊಬ್ಬರನ್ನು ಬೆದರಿಸಿ 37.8 ಲಕ್ಷ ಸುಲಿಗೆ ಮಾಡಿದ್ದ ದುಷ್ಕರ್ಮಿಯನ್ನು ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೆ.ಜೆ.ನಗರದ ಗೋರಿಪಾಳ್ಯದ ಅಸ್ಲಾಂ ಪಾಷ ಬಂಧಿತನಾಗಿದ್ದು, ಆರೋಪಿಯಿಂದ 30.54 ಲಕ್ಷ ನಗದು ಹಾಗೂ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ. ಮಾಮೂಲ್‌ ಪೇಟೆಯ ಮೆಹ್ತಾ ಪ್ಲಾಜಾ ಬಳಿ ವಿ.ವಿ.ಪುರದ ಅಂಕಿತ್‌ ಕುಮಾರ್‌ ಅವರು, ಬಟ್ಟೆ ವ್ಯಾಪಾರದ ಹಣ ಪಡೆದುಕೊಂಡಿದ್ದರು. ಆಗ ಹಣದ ಬ್ಯಾಗ್‌ ಅನ್ನು ಸ್ಕೂಟರ್‌ ಡಿಕ್ಕಿಯಲ್ಲಿಡುವ ವೇಳೆ ಅಪರಿಚಿತರು ಕಬ್ಬಿಣದ ಸಲಾಕೆಯ ತೋರಿಸಿ ಬೆದರಿಸಿ ಹಣ ದೋಚಿ ಪರಾರಿಯಾಗಿದ್ದರು. 

ಎಟಿಎಂ ಸರ್ವಿಸ್‌ ನೆಪದಲ್ಲಿ 50 ಲಕ್ಷ ಲೂಟಿ..!

ಈ ಬಗ್ಗೆ ಸಿಸಿಟಿವಿ ಕ್ಯಾಮೆರಾ ಮಾಹಿತಿ ಆಧರಿಸಿ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಈ ಕೃತ್ಯದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬನಿಗೆ ತನಿಖೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!