ಬೆಂಗಳೂರು: ಓಲಾ, ಊಬರ್ ಚಾಲಕರೇ ಈತನ ಟಾರ್ಗೆಟ್, ಖರ್ತನಾಕ್‌ ಖದೀಮನ ಬಂಧನ

Published : Jun 17, 2023, 10:24 AM IST
ಬೆಂಗಳೂರು: ಓಲಾ, ಊಬರ್ ಚಾಲಕರೇ ಈತನ ಟಾರ್ಗೆಟ್, ಖರ್ತನಾಕ್‌ ಖದೀಮನ ಬಂಧನ

ಸಾರಾಂಶ

ಚಾಲಕರಿಗೆ ಚಾಕು ತೋರಿಸಿ ಬೆದರಿಸಿ ಫೋನ್ ಫೇ ಮೂಲಕ ಹಣ ಹಾಕಿಸಿಕೊಳ್ತಿದ್ದ, ಚಾಲಕನ ಕಡೆಯಿಂದ ಅವರ ಕುಟುಂಬಸ್ಥರಿಗೆ ಕರೆ ಮಾಡಿ ಹಣ ಹಾಕಿಸುವಂತೆಯೂ ಹೆದರಿಸುತ್ತಿದ್ದನಂತೆ. 

ಬೆಂಗಳೂರು(ಜೂ.17):  ಪ್ರಯಾಣಿಕನ ಸೋಗಿನಲ್ಲಿ ಬುಕ್ ಮಾಡಿ ಚಾಕು ತೋರಿಸಿ ಸುಲಿಗೆ ಮಾಡಲು ಯತ್ನಿಸಿದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ಪೊಲೀಸರು ಆರೋಪಿ ವಿನಯ್ ಎಂಬಾತನನ್ನ ಬಂಧಿಸಿದ್ದಾರೆ.  

ಪೊಲೀಸರಿಗೆ ದೂರು ಕೊಡಲ್ಲ ಅಂತಾ ಓಲಾ ಚಾಲಕನನ್ನ ಟಾರ್ಗೆಟ್ ಮಾಡಿ ಆರೋಪಿ ವಿನಯ್ ಸುಲಿಗೆ ಮಾಡಲುತ್ತಿದ್ದನಂತೆ. ಹೆಚ್ಎಎಲ್, ಬಾಣಸವಾಡಿ, ಹೈ ಗ್ರೌಂಡ್ಸ್, ಎಂ.ಜಿ ರೋಡ್ ಈ ಭಾಗಗಳಿಂದ ಕ್ಯಾಬ್ ಬುಕ್ ಮಾಡಿ ಸುಲಿಗೆ ಮಾಡಿದ್ದ. ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸುಲಿಗೆ ಮಾಡುತ್ತಿದ್ದ ಆರೋಪಿ ವಿನಯ್. 

ಬೆಂಗಳೂರು: ಆಟೋ ಚಾಲಕನ ದುಂಡಾವರ್ತನೆ, ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನ

ಚಾಲಕರಿಗೆ ಚಾಕು ತೋರಿಸಿ ಬೆದರಿಸಿ ಫೋನ್ ಫೇ ಮೂಲಕ ಹಣ ಹಾಕಿಸಿಕೊಳ್ತಿದ್ದ, ಚಾಲಕನ ಕಡೆಯಿಂದ ಅವರ ಕುಟುಂಬಸ್ಥರಿಗೆ ಕರೆ ಮಾಡಿ ಹಣ ಹಾಕಿಸುವಂತೆಯೂ ಹೆದರಿಸುತ್ತಿದ್ದನಂತೆ. ಆಸ್ಪತ್ರೆಗೆ ಸೇರಿದ್ದೀನಿ ನನಗೆ ಹಣದ ಅವಶ್ಯಕತೆಯಿದೆ ಎಂದು ಚಾಲಕರ ಕುಟುಂಬಸ್ಥರಿಗೆ ಕರೆ ಮಾಡಿಸುತ್ತಿದ್ದ. ಉತ್ತರ ಕರ್ನಾಟಕದ ಓಲಾ, ಊಬರ್ ಚಾಲಕರನ್ನೇ ಟಾರ್ಗೆಟ್ ಈತ ಸುಲಿಗೆ ಮಾಡುತ್ತಿದ್ದ. 

ಆರೋಪಿ ಬಂಧನದಿಂದ ನಾಲ್ಕು ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ