ಸಿಂಧನೂರು: ಮದ್ಯಪಾನಕ್ಕೆ ಅವಕಾಶ ನೀಡದಿದ್ದಕ್ಕೆ ಪಿಸ್ತೂಲ್‌ನಿಂದ ಫೈರ್‌, ವ್ಯಕ್ತಿ ಬಂಧನ

Published : Nov 30, 2022, 02:15 PM IST
ಸಿಂಧನೂರು: ಮದ್ಯಪಾನಕ್ಕೆ ಅವಕಾಶ ನೀಡದಿದ್ದಕ್ಕೆ ಪಿಸ್ತೂಲ್‌ನಿಂದ ಫೈರ್‌, ವ್ಯಕ್ತಿ ಬಂಧನ

ಸಾರಾಂಶ

ಪಿಸ್ತೂಲ್‌ನಿಂದ ಶೂಟ್‌ ಮಾಡುವುದಾಗಿ ಬೆದರಿಕೆ ಹಾಕಿ, ಕಾರ್‌ನಲ್ಲಿದ್ದ ರಿವಾಲ್ವಾರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ ಬಂಧಿತ ಹನುಮಂತಪ್ಪ 

ಸಿಂಧನೂರು(ನ.30):  ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಮದ್ಯಪಾನ ಮಾಡುವುದಕ್ಕೆ ಅವಕಾಶ ನೀಡದಿರುವುದಕ್ಕೆ ವ್ಯಕ್ತಿಯೋರ್ವ ರಿವಾಲ್ವಾರ್‌ನಿಂದ ಗುಂಡು ಹಾರಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಶ್ರೀಪುರಂಜಂಕ್ಷನ್‌ ಬಳಿಯಿರುವ ಸಿರಿ ಫ್ಯಾಮಿಲಿ ರೆಸ್ಟೋರೆಂಟ್‌ ಬಳಿ ಸೋಮವಾರ ತಡರಾತ್ರಿ ಈ ಘಟನೆ ಜರುಗಿದೆ. ಕಲಬುರಗಿ ಮೂಲದ ಗುಂಡಪ್ಪ ಅಲಿಯಾಸ್‌ ಹನುಮಂತಪ್ಪ ಜೇಮಶೆಟ್ಟಿಫೈರಿಂಗ್‌ ಮಾಡಿದ ವ್ಯಕ್ತಿಯೆಂದು ಗುರುತಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಸಿದ್ದಾಪುರ ಗ್ರಾಮಕ್ಕೆ ಹನುಮಂತಪ್ಪ ತಮ್ಮ ಕುಟುಂಬದ ಸಂಬಂಧಿಕರೊಡನೆ ಸಮಾರಂಭಕ್ಕೆಂದು ತೆರಳಿದ್ದರು. ಸಮಾರಂಭ ಮುಗಿಸಿಕೊಂಡು ವಾಪಸ್‌ 2 ಕಾರ್‌ನಲ್ಲಿ 8 ಜನರೊಂದಿಗೆ ಕಲಬುರಗಿಗೆ ಮರಳುವಾಗ ಮಾರ್ಗ ಮಧ್ಯ ಶ್ರೀಪುರಂಜಂಕ್ಷನ್‌ ಬಳಿ ಸಿರಿ ಫ್ಯಾಮಿಲಿ ರೆಸ್ಟೋರೆಂಟ್‌ನಲ್ಲಿ ಊಟಕ್ಕಾಗಿ ನಿಲ್ಲಿಸಿದ್ದಾರೆ. ಹೊಟೇಲ್‌ನಲ್ಲಿ ಹನುಮಂತಪ್ಪ ಮದ್ಯ ಬಾಟಲಿ ಹಾಗೂ ಧೂಮಪಾನ ಮಾಡುತ್ತಿದ್ದರು. ಆಗ ಹೋಟೆಲ್‌ನಲ್ಲಿ ಕೆಲಸ ಮಾಡುವ ಸರ್ವರ್‌ ಇಲ್ಲಿ ಮದ್ಯಪಾನ ಹಾಗೂ ಧೂಮಪಾನಕ್ಕೆ ಅವಕಾಶವಿಲ್ಲವೆಂದು ಹೇಳಿದ್ದಾನೆ. ನಂತರ ಸರ್ವರ್‌ನೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದ ಹನುಮಂತಪ್ಪ ಪಿಸ್ತೂಲ್‌ನಿಂದ ಶೂಟ್‌ ಮಾಡುವುದಾಗಿ ಬೆದರಿಕೆ ಹಾಕಿ, ಕಾರ್‌ನಲ್ಲಿದ್ದ ರಿವಾಲ್ವಾರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ನಡೆದಿದೆ.

Chikkaballapur: ಪೊಲೀಸರ ಮೇಲೇ ಗುಂಡು ಹಾರಿಸಿ ಮನೆ ದರೋಡೆ!

ಈ ಘಟನೆಯಿಂದ ಗಾಬರಿಗೊಂಡು ಸ್ಥಳದಲ್ಲಿದ್ದ ಕೆಲವರು ಓಡಿ ಹೋಗಿದ್ದಾರೆ. ಅದೇ ರೀತಿ ಫೈರಿಂಗ್‌ ಮಾಡಿದ ಹನುಮಂತಪ್ಪ ಸಹ ಸ್ಥಳದಿಂದ ಪರಾರಿಯಾಗಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ಸಿಂಧನೂರು ಗ್ರಾಮೀಣ ಪೊಲೀಸರು ಕಾರು ಮತ್ತು ವ್ಯಕ್ತಿಯ ಮಾಹಿತಿ ಪಡೆದು ಬಂಧಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ