ಬೆಂಗಳೂರು: ರಂಗೋಲಿ ಹಾಕದ ಮನೆಗಳ ಗುರುತಿಸಿ ಕಳ್ಳತನ ಮಾಡ್ತಿದ್ದ ಖರ್ತಾನಕ್‌ ಖದೀಮನ ಬಂಧನ..!

Published : Jul 31, 2024, 12:39 PM ISTUpdated : Jul 31, 2024, 01:03 PM IST
ಬೆಂಗಳೂರು: ರಂಗೋಲಿ ಹಾಕದ ಮನೆಗಳ ಗುರುತಿಸಿ ಕಳ್ಳತನ ಮಾಡ್ತಿದ್ದ ಖರ್ತಾನಕ್‌ ಖದೀಮನ ಬಂಧನ..!

ಸಾರಾಂಶ

ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನ ಜೆ.ಸಿ.ಪುರ ಗ್ರಾಮದ ಮುಸ್ಲಿಂ ಕಾಲೋನಿ ನಿವಾಸಿ ಶೋಯೆಬ್ ಪಾಷ ಅಲಿಯಾಸ್ ತುರ್ಕ ಬಾಬು ಬಂಧಿತನಾಗಿದ್ದು, ಆರೋಪಿಯಿಂದ 101 ಗ್ರಾಂ ತೂಕದ ಚಿನ್ನಾಭರಣ ಹಾಗೂ 2 ಲ್ಯಾಪ್ಟಾಪ್‌ಗಳು ಸೇರಿ ₹8 ಲಕ್ಷ ಮೌಲ್ಯದ ಜಪ್ತಿ ಮಾಡಲಾಗಿದೆ. 

ಬೆಂಗಳೂರು(ಜು.31):  ಮನೆಗಳ್ಳತನ ಕೃತ್ಯದಲ್ಲಿ ತೊಡಗಿದ್ದ ಕಿಡಿಗೇಡಿಯೊಬ್ಬನನ್ನು ಸೋಲದೇವನ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನ ಜೆ.ಸಿ.ಪುರ ಗ್ರಾಮದ ಮುಸ್ಲಿಂ ಕಾಲೋನಿ ನಿವಾಸಿ ಶೋಯೆಬ್ ಪಾಷ ಅಲಿಯಾಸ್ ತುರ್ಕ ಬಾಬು ಬಂಧಿತನಾಗಿದ್ದು, ಆರೋಪಿಯಿಂದ 101 ಗ್ರಾಂ ತೂಕದ ಚಿನ್ನಾಭರಣ ಹಾಗೂ 2 ಲ್ಯಾಪ್ಟಾಪ್‌ಗಳು ಸೇರಿ ₹8 ಲಕ್ಷ ಮೌಲ್ಯದ ಜಪ್ತಿ ಮಾಡಲಾಗಿದೆ. ಕೆಲ ತಿಂಗಳ ಹಿಂದೆ ಚಿಕ್ಕಬಾಣಾವರದ ವಿನಾಯಕ ಲೇಔಟ್‌ನಲ್ಲಿ ಪುಷ್ಪಾ ಎಂಬುವರ ಮನೆಯಲ್ಲಿ ಕಳ್ಳತನವಾಗಿತ್ತು. ಈ ಕೃತ್ಯದ ತನಿಖೆ ನಡೆಸಿದ ಪೊಲೀಸರು, ಸಿಸಿಟಿವಿ ಕ್ಯಾಮೆರಾ ಹಾಗೂ ಬೆರಳಚ್ಚು ಮಾದರಿ ಸೇರಿ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೈಕ್ ಕಳ್ಳತನಕ್ಕೆ ಬಂದವನ ಆ್ಯಕ್ಟಿಂಗ್‌ಗೆ ಫಿದಾ ಆಗೋದು ಖಚಿತ, ಸಿಸಿಟಿವಿಯಿಂದ ಸ್ಟಂಪ್ ಔಟ್!

ಪಾಷ ವೃತ್ತಿಪರ ಕ್ರಿಮಿನಲ್ ಆಗಿದ್ದು, ಹಲವು ವರ್ಷಗಳಿಂದ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ್ದಾನೆ. 9ನೇ ತರಗತಿಗೆ ಓದಿಗೆ ಸಲಾಂ ಹೊಡೆದ ಆತ, ಮೊದಲು ಉಮೇಶ್ ಅಲಿಯಾಸ್ ಸಿ.ಕೆ.ಬಾಬು ಎಂಬಾತನ ಜತೆ ಸೇರಿ ಖೋಟಾ ನೋಟು ದಂಧೆಯಲ್ಲಿ ತೊಡಗಿದ್ದ. ಈ ಕೃತ್ಯದಲ್ಲಿ ಆತನನ್ನು ರಾಜಗೋಪಾಲನಗರ ಠಾಣೆ ಪೊಲೀ ಸರು ಬಂಧಿಸಿ ಜೈಲಿಗೆ ಅಟ್ಟಿದ್ದರು. ಈ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಪಾಷ ಮನೆಗಳ್ಳತನ ಕೃತ್ಯಕ್ಕಿಳಿದಿದ್ದ. ಈತನ ಮೇಲೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಹಗಲು ಹೊತ್ತಿನಲ್ಲಿ ಮುಂಬಾಗಿಲಿಗೆ ರಂಗೋಲಿ ಹಾಕದ ಮನೆಗಳನ್ನು ಗುರಿಯಾಗಿಸಿಕೊಂಡು ಪಾಷ ಕಳ್ಳತನ ಕೃತ್ಯ ಎಸಗುತ್ತಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು