ಅಧಿಕಾರಿಗಳ ಕಣ್ತಪ್ಪಿಸಲು ಪಾದದಲ್ಲಿ ಚಿನ್ನವಿಟ್ಟ ಖದೀಮನ ಬಂಧನ

Suvarna News   | Asianet News
Published : Apr 14, 2021, 07:51 AM ISTUpdated : Apr 14, 2021, 08:17 AM IST
ಅಧಿಕಾರಿಗಳ ಕಣ್ತಪ್ಪಿಸಲು ಪಾದದಲ್ಲಿ ಚಿನ್ನವಿಟ್ಟ ಖದೀಮನ ಬಂಧನ

ಸಾರಾಂಶ

ದುಬೈನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ| ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ| ಕೆಂಪೇಗೌಡ ಅಂತರಾಷ್ಟ್ರೀಯ ‌ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ| ಪರಿಶೀಲನೆ ವೇಳೆ ಚಿನ್ನ ಪತ್ತೆ| 

ಬೆಂಗಳೂರು(ಏ.14): ಪ್ರಯಾಣಿಕನೊಬ್ಬ ತನ್ನ ಕಾಲಿನ ಪಾದದಲ್ಲಿಟ್ಟುಕೊಂಡು ಬಂದಿದ್ದ‌‌ ಚಿನ್ನವನ್ನ ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳ ವಶಪಡಿಸಿಕೊಂಡ ಘಟನೆ ಇಂದು(ಬುಧವಾರ) ಕೆಂಪೇಗೌಡ ಅಂತರಾಷ್ಟ್ರೀಯ ‌ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತನಿಂದ 5.42 ಲಕ್ಷ ರೂ. ಮೌಲ್ಯದ ಚಿನ್ನವನ್ನ ‌ವಶಪಡಿಸಿಕೊಳ್ಳಲಾಗಿದೆ.

ಆರೋಪಿ ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ‌ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ಪಾದದಲ್ಲಿ ಚಿನ್ನವಿಟ್ಟು ಬ್ಯಾಂಡೆಜ್ ಹಾಕಿದ್ದ ಎಂದು ತಿಳಿದು ಬಂದಿದೆ. 

ಬೆಂಗಳೂರು: ಕೇರಳದಿಂದ ಬಸ್ಸಿನ ಲಗೇಜ್‌ ಬಾಕ್ಸಲ್ಲಿ ಗಾಂಜಾ ಸಾಗಾಟ

ಪರಿಶೀಲನೆ ವೇಳೆ ಅನುಮಾನಗೊಂಡು ಪರಿಶೀಲಿಸಿದಾಗ ಚಿನ್ನ ಪತ್ತೆಯಾಗಿದೆ ಎಂದು ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನ ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?