ಬೆಂಗಳೂರು: ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಕಿಡಿಗೇಡಿ ಬಂಧನ

Published : Dec 01, 2022, 07:30 AM IST
ಬೆಂಗಳೂರು: ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಕಿಡಿಗೇಡಿ ಬಂಧನ

ಸಾರಾಂಶ

ಆರೋಪಿಯಿಂದ 1.27 ಲಕ್ಷ ರು ಮೌಲ್ಯದ 8 ಕೆಜಿ ಗಾಂಜಾ, ಮೊಬೈಲ್‌ ಹಾಗೂ ಲ್ಯಾಪ್‌ಟಾಪ್‌ ಜಪ್ತಿ 

ಬೆಂಗಳೂರು(ಡಿ.01):  ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಕಿಡಿಗೇಡಿಯೊಬ್ಬನ್ನು ಆಂಧ್ರಪ್ರದೇಶದ ಹಿಂದೂಪುರದ ಗಡಿಯಿಂದ ಬೆನ್ನು ಹತ್ತಿ ಕೊನೆಗೆ ನಗರದಲ್ಲಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಒಡಿಶಾ ರಾಜ್ಯದ ಕಾಲಕನ್ಹು ಪಾಣಿಗ್ರಾಹಿ ಬಂಧಿತನಾಗಿದ್ದು, ಆರೋಪಿಯಿಂದ 1.27 ಲಕ್ಷ ರು ಮೌಲ್ಯದ 8 ಕೆಜಿ ಗಾಂಜಾ, ಮೊಬೈಲ್‌ ಹಾಗೂ ಲ್ಯಾಪ್‌ಟಾಪ್‌ ಜಪ್ತಿ ಮಾಡಲಾಗಿದೆ. 

ಸಿಗರೇಟ್ Vs ಗಾಂಜಾ: ಯಾವುದು ತುಂಬಾ ಅಪಾಯಕಾರಿ? ಸಂಶೋಧನೆ ಹೇಳೋದೇನು?

ಒಡಿಶಾದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಆರೋಪಿ ಗಾಂಜಾ ಸಾಗಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆಂಧ್ರಪ್ರದೇಶ ರೈಲಿನಲ್ಲಿ ತಪಾಸಣೆ ಆರಂಭಿಸಿದ್ದಾರೆ. ಆಗ ರೈಲಿನಲ್ಲಿ ಕಳ್ಳಾಟವಾಡಿದ ಆರೋಪಿ ಕೊನೆಗೂ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!