ರಾಮನಗರ: ಕೇವಲ 500 ರು.ಗೆ ಕೊಲೆ ಮಾಡಿದ್ದ ಆರೋಪಿ ಸೆರೆ..!

Published : Feb 15, 2024, 06:38 AM IST
ರಾಮನಗರ: ಕೇವಲ 500 ರು.ಗೆ ಕೊಲೆ ಮಾಡಿದ್ದ ಆರೋಪಿ ಸೆರೆ..!

ಸಾರಾಂಶ

ಫೆ. 7ರಂದು ಕೊಲೆ ನಡೆದ ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಗುರುತಿನ ಮೇಲೆ ಮೃತ ವ್ಯಕ್ತಿಯನ್ನು ಗುರುತಿಸಲಾಗಿತ್ತು. ಸಿಸಿ ಕ್ಯಾಮೆರಾ ಫುಟೇಜ್‌ಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. 

ಚನ್ನಪಟ್ಟಣ(ಫೆ.15):  ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬನ ಜೇಬಿನಲಿದ್ದ 500 ರು.ಗಾಗಿ ಕೊಲೆಮಾಡಿ ಪರಾರಿಯಾಗಿದ್ದ ಆರೋಪಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿ ಗ್ರಾಮದ ಸ್ವಾಮಿ (೨೭) ಬಂಧಿತ ಆರೋಪಿ. ಕಳೆದ ವಾರ ನಗರದ ಸಾತನೂರು ವೃತ್ತದಲ್ಲಿರುವ ಶ್ರೀ ಕಬ್ಬಾಳಮ್ಮ ಹೋಟೆಲ್ ಹಿಂಭಾಗದ ಬಯಲಿನಲ್ಲಿ ಬಿಹಾರ ಮೂಲದ ಸಂಜೀತ್ ಕುಮಾರ್‌ ಎಂಬ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿಯನ್ನು ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಫೆ. ೭ರಂದು ಕೊಲೆ ನಡೆದ ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಗುರುತಿನ ಮೇಲೆ ಮೃತ ವ್ಯಕ್ತಿಯನ್ನು ಗುರುತಿಸಲಾಗಿತ್ತು. ಸಿಸಿ ಕ್ಯಾಮೆರಾ ಫುಟೇಜ್‌ಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಕುಡಿದು ಮತ್ತಿನಲ್ಲಿದ್ದ ಕೊಲೆಯಾದ ಸಂಜೀತ್ ಕುಮಾರ್‌ಗೆ ಮಲಗಲು ಬಯಲಿನ ಜಾಗ ತೋರಿಸಿದ ಸ್ವಾಮಿ, ಆತ ಮಲಗಿದ ಮೇಲೆ ಕಲ್ಲು ಎತ್ತಿಹಾಕಿ, ಜೇಬಿನಲಿದ್ದ 500 ರು. ಎತ್ತಿಕೊಂಡು ಪರಾರಿಯಾಗಿದ್ದು ಪೊಲೀಸರು ಕಾರ್ಯಾಚರಣೆ ವೇಳೆ ತಿಳಿದುಬಂದಿದ್ದು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

ಕಲಬುರಗಿ: ಗಂಡ, ಅತ್ತೆಯ ಕಿರುಕುಳ, 2 ವರ್ಷದ ಕಂದಮ್ಮಳನ್ನ ಕೊಲೆಗೈದು ನೇಣಿಗೆ ಶರಣಾದ ತಾಯಿ

ಇದೇ ಆರೋಪಿ ನಗರದ ಕುರುಬರ ಹಾಸ್ಟೆಲ್ ಬಳಿ ಇರುವ ಗಣೇಶನ ದೇವಸ್ಥಾನದ ಹುಂಡಿಯನ್ನು ಒಡೆದು ಹಣ ದೋಚಿದ್ದನ್ನು ಸಹ ತನಿಖಾ ತಂಡ ಪತ್ತೆ ಹೆಚ್ಚಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ