
ಬೆಂಗಳೂರು(ಫೆ.23): ನಗರದ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ದಿನೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ (33) ಬಂಧಿತ ಆರೋಪಿಯಾಗಿದ್ದಾನೆ.
ಅರುಣ್ ಹೆಂಡತಿ ಬಗ್ಗೆ ಕೆಟ್ಟದಾಗಿ ಹೇಳಿದ್ದಕ್ಕೆ ದಿನೇಶ್ ಹತ್ಯೆ ನಡೆದಿದೆ ಅಂತ ತಿಳಿದು ಬಂದಿದೆ. ಬಂಧಿತ ಆರೋಪಿ ಅರುಣ್ ದಿನೇಶ್ ಬಳಿ 1 ಲಕ್ಷ ಸಾಲ ಪಡೆದಿದ್ದನು. ಸಾಲವನ್ನ ವಾಪಸ್ಸು ಕೇಳಿದಾಗ ಕೊಡದೆ ಅರುಣ್ ಸತಾಯಿಸುತ್ತಿದ್ದನಂತೆ. ನಿನ್ನ ಹೆಂಡತಿಯನ್ನ ವೇಶ್ಯಾವಟಿಕೆಗೆ ತಳ್ಳಿಯಾದ್ರೂ ನನ್ನ ಹಣ ಕೊಡು ಎಂದಿದ್ದ ದಿನೇಶ್.
40ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕರೆ ಮಾಡಿದ್ದ ಡೆಲಿವರಿ ಬಾಯ್ ಅರೆಸ್ಟ್!
ದಿನೇಶ್ನ ಈ ಮಾತಿನಿಂದ ಅರುಣ್ ಅವಮಾನಕ್ಕೆ ಒಳಗಾಗಿದ್ದನು. ಹಣ ವಾಪಸ್ಸು ಕೊಡುವುದಾಗಿ ಹೇಳಿ ದಿನೇಶ್ ನನ್ನ ಕರೆಸಿಕೊಂಡಿದ್ದ, ದಿನೇಶ್ ಬರುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಅರುಣ್. ಆರೋಪಿಯನ್ನ ಬಂಧಿಸಿದ ಜ್ಞಾನ ಭಾರತಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ