Robbery: ಆಟೋ ಚಾಲಕನ ಸೋಗಿನಲ್ಲಿ ದರೋಡೆ: ಕುಖ್ಯಾತ ಕಳ್ಳನ ಬಂಧನ

Kannadaprabha News   | Asianet News
Published : Nov 28, 2021, 02:29 PM IST
Robbery: ಆಟೋ ಚಾಲಕನ ಸೋಗಿನಲ್ಲಿ ದರೋಡೆ: ಕುಖ್ಯಾತ ಕಳ್ಳನ ಬಂಧನ

ಸಾರಾಂಶ

*  ತಲೆಮರೆಸಿಕೊಂಡ ಮೂವರು ಸಹಚರರು *  ಆಟೋ ಓಡಿಸುವಾಗ ಬೀಗ ಹಾಕಿದ ಮನೆಗಳ ಗುರುತಿಸಿ ಕಳವು: ಬಂಧನ *  ದ್ವಿಚಕ್ರ ವಾಹನ ಕಳವು: ಅಪ್ರಾಪ್ತನ ಬಂಧನ  

ಬೆಂಗಳೂರು(ನ.28):  ರಾತ್ರಿ ವೇಳೆ ಆಟೋ ಹತ್ತಿದ್ದ ಪ್ರಯಾಣಿಕನಿಗೆ ಚಾಕು ತೋರಿಸಿ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಪ್ರಕರಣ ಸಂಬಂಧ ಕುಖ್ಯಾತ ಕಳ್ಳನನ್ನು(Thief) ಉಪ್ಪಾರಪೇಟೆ ಠಾಣೆ ಪೊಲೀಸರು(Police) ಬಂಧಿಸಿದ್ದಾರೆ.

ರಾಜಾನುಕುಂಟೆ ಸಮೀಪದ ಹೊನ್ನೇನಹಳ್ಳಿ ಮನೋಜ್‌ ಕುಮಾರ್‌ ಅಲಿಯಾಸ್‌ ಬಿಸ್ನಿ(19) ಬಂಧಿತ(Arrest). ವಿಚಾರಣೆ ವೇಳೆ ಆರೋಪಿ(Accused) ನೀಡಿದ ಮಾಹಿತಿ ಮೇರೆಗೆ 7 ಲಕ್ಷ ರು. ಮೌಲ್ಯದ 10 ಗ್ರಾಂ ತೂಕದ ಚಿನ್ನದ ಸರ, 2 ಕ್ಯಾಮೆರಾ, ಲೆನ್ಸ್‌ಗಳು, ಕೃತ್ಯಕ್ಕೆ ಬಳಸಿದ್ದ ಆಟೋ(Auto) ರಿಕ್ಷಾ ಹಾಗೂ ಚಾಕು ಜಪ್ತಿ ಮಾಡಲಾಗಿದೆ. ಸದರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಮೂವರು ಸಹಚರರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Fraud: ಸರ್ಕಾರಿ ಕೆಲಸದ ಆಮಿಷವೊಡ್ಡಿ ಕೋಟಿ ಕೋಟಿ ವಂಚನೆ..!

ಆರೋಪಿ ಮನೋಜ್‌ ವಿಚಾರಣೆ ವೇಳೆ ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ ಹಾಗೂ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣ ಪತ್ತೆಯಾಗಿದೆ. ಆರೋಪಿಗಳು ನಗರದಲ್ಲಿ ಇದೇ ರೀತಿ ಹಲವು ಕೃತ್ಯ ಎಸೆಗಿರುವ ಸಾಧ್ಯತೆಯಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ ಆರೋಪಿ ಮನೋಜ್‌ನನ್ನು ನ್ಯಾಯಾಲಯಕ್ಕೆ(Court) ಹಾಜರುಪಡಿಸಿ ವಶಕ್ಕೆ ಪಡೆಯುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಆಟೋ ಓಡಿಸುವಾಗ ಬೀಗ ಹಾಕಿದ ಮನೆಗಳ ಗುರುತಿಸಿ ಕಳವು: ಬಂಧನ

ಬೆಂಗಳೂರು(Bengaluru): ಹಗಲಿನಲ್ಲಿ ಆಟೋ ಓಡಿಸಿಕೊಂಡು ಬೀಗ ಹಾಕಿದ ಮನೆ ಹಾಗೂ ಅಂಗಡಿಗಳನ್ನು ಗುರುತಿಸಿ ಬಳಿಕ ಬೀಗ ಮುರಿದು ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕುರುಬರಹಳ್ಳಿ ನಿವಾಸಿ ವರದರಾಜು(53) ಬಂಧಿತ. ಈತ ನೀಡಿದ ಮಾಹಿತಿ ಮೇರೆಗೆ 25 ಲಕ್ಷ ರು. ಮೌಲ್ಯದ 455 ಗ್ರಾಂ ಚಿನ್ನಾಭರಣ(Gold) ಹಾಗೂ 12 ಸಾವಿರ ರು. ನಗದು ವಶಡಿಸಿಕೊಳ್ಳಲಾಗಿದೆ. ಕೆಲ ದಿನಗಳ ಹಿಂದೆ ರಾಜಾಜಿನಗರ ಸರಹದ್ದಿನಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳವು ಮಾಡಲಾಗಿತ್ತು. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಆರೋಪಿ ವರದರಾಜು, ಹಲವು ವರ್ಷಗಳಿಂದ ಕಳ್ಳತನ(Theft) ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಹಗಲಿನಲ್ಲಿ ನಗರದಲ್ಲಿ ಆಟೋ ಓಡಿಸಿಕೊಂಡು ಬೀಗ ಹಾಕಿದ ಮನೆ ಹಾಗೂ ಅಂಗಡಿಗಳನ್ನು ಗುರುತಿಸಿಕೊಂಡು ಬಳಿಕ ಮುಂಜಾನೆ 4 ಗಂಟೆ ಸುಮಾರಿಗೆ ಬೀಗ ಮುರಿದು ಮನೆಯಲ್ಲಿ ಸಿಗುವ ಹಣ ಹಾಗೂ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ. ಈ ಹಿಂದೆ ನಂದಿನಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮನೆಗಳವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ. ಜಾಮೀನಿನ(Bail) ಮೇಲೆ ಹೊರಬಂದು ಮತ್ತೆ ಕೈ ಚಳಕ ತೋರಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಯ ಬಂಧನದಿಂದ ರಾಜಾಜಿನಗರ ಠಾಣೆ ವ್ಯಾಪ್ತಿಯ ನಾಲ್ಕು ಮನೆಗಳವು ಪ್ರಕರಣಗಳು(Cases) ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Miscreants Arrested: ನಾಗ ದೇವರ ಮೂರ್ತಿ ಧ್ವಂಸಗೊಳಿಸಿದವರಿಗೆ ಸಂಕಷ್ಟ, ಪೊಲೀಸ್ ತನಿಖೆ ವೇಳೆ ಬಹಿರಂಗ

ದ್ವಿಚಕ್ರ ವಾಹನ ಕಳವು: ಅಪ್ರಾಪ್ತನ ಬಂಧನ

ಬೆಂಗಳೂರು: ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ(Bike) ಕಳವು ಮಾಡುತ್ತಿದ್ದ ಆರೋಪಿಯನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಅಪ್ರಾಪ್ತನಾಗಿದ್ದು(Minor), ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ 3.9 ಲಕ್ಷ ರು. ಮೌಲ್ಯದ ಏಳು ದ್ವಿಚಕ್ರವಾಹನಗಳು ಹಾಗೂ ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಈತನ ಬಂಧನದಿಂದ ರಾಜರಾಜೇಶ್ವರಿನಗರ, ಚನ್ನಮ್ಮನಕೆರೆ ಅಚ್ಚುಕಟ್ಟು, ಪುಟ್ಟೇನಹಳ್ಳಿ, ಕುಮಾರಸ್ವಾಮಿ ಲೇಔಟ್‌, ಸುಬ್ರಮಣ್ಯಪುರ ಪೊಲೀಸ್‌ ಠಾಣೆ ಸರಹದ್ದಿನಲ್ಲಿ ಕಳವಾಗಿದ್ದ ಏಳು ದ್ವಿಚಕ್ರ ವಾಹನ ಪ್ರಕರಣ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ವಿವಿಧೆಡೆ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ರಾತ್ರಿ ವೇಳೆ ಕದಿಯುತ್ತಿದ್ದ. ಬಳಿಕ ಮಾರಾಟ ಮಾಡುತ್ತಿದ್ದ. ದಾಖಲೆ ಇಲ್ಲದೆ ಇರುವುದರಿಂದ ಗಿರಾಕಿಗಳು ಕೊಟ್ಟಷ್ಟುಹಣ ಪಡೆದು ಮೋಜು-ಮಸ್ತಿ ಮಾಡಿ ಕಳೆಯುತ್ತಿದ್ದ. ಹಣ ಖಾಲಿಯಾದಾಗ ಮತ್ತೆ ದ್ವಿಚಕ್ರ ವಾಹನ ಕಳವಿಗೆ ಇಳಿಯುತ್ತಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?