ಕೊಡಗು: ಹಸುವಿನ ಮೇಲೂ ಪೈಶಾಚಿಕ ಕೃತ್ಯ, ವಿಕೃತ ಕಾಮಿಯ ಬಂಧನ

Published : Nov 29, 2022, 10:27 AM ISTUpdated : Nov 29, 2022, 10:40 AM IST
ಕೊಡಗು: ಹಸುವಿನ ಮೇಲೂ ಪೈಶಾಚಿಕ ಕೃತ್ಯ, ವಿಕೃತ ಕಾಮಿಯ ಬಂಧನ

ಸಾರಾಂಶ

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆ ಎಂಬಲ್ಲಿ ನಡೆದ ಘಟನೆ 

ಕೊಡಗು(ನ.29):  ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಹೇಯ ಕೃತ್ಯ ಎಸಗುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆ ಎಂಬಲ್ಲಿ ನಡೆದಿದೆ. ನ. 27ರಂದು ಹೇಯ್ಯ ಕೃತ್ಯ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬ೦ಧನಕ್ಕೆ ಒಳಪಡಿಸಿದ್ದಾರೆ.

ಪೊಲೀಸ್ ಮಾಹಿತಿಯ ಪ್ರಕಾರ ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದ ಸಿ.ಎ. ದೇವಯ್ಯ ಅವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟಿದ್ದು ತಾವು ಸಂತೆಗೆ ಹೋಗಿ ವಾಪಾಸ್ಸು ಬರುವ ಸಂದರ್ಭ ತಮ್ಮ ಗದ್ದೆಯ ದಾರಿಯಲ್ಲಿ ಮೋಟಾರ್ ಬೈಕ್‌ ನಿಂತಿದ್ದನ್ನು ಗಮನಿಸಿದ್ದಾರೆ. ದೇವಯ್ಯ ಮನೆ ಹೋಗಿ ಮೇಯಲು ಬಿಟ್ಟಿದ್ದ ಹಸುವನ್ನು ವಾಪಾಸು ಕೊಟ್ಟಿಗೆಗೆ ತರಲು ಹೋದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಸುವಿನ ಮೇಲೆ ಪೈಶಾಚಿ ಕೃತ್ಯ ಎಸಗುತ್ತಿರುವುದನ್ನು ನೋಡಿ ಆತನನ್ನು ಹಿಡಿದು ವಿಚಾರಿಸಿದಾಗ ಆತ  ಸುಂಟಿಕೊಪ್ಪ ಪಂಪ್ ಹೌಸ್ ನಿವಾಸಿ ಅಬೂಬಕ್ಕರ್ ಸಿದ್ಧಿಕ್ ಎಂದು ತಿಳಿದ ಬಂದಿದೆ. 

ಬಾಲಕಿಯ ಮೇಲೆ ಕಣ್ಣು ಹಾಕಿದ ಕಾಮುಕನಿಗೆ ಗೂಸಾ

ಪೊಲೀಸರಿಗೆ ದೂರು ನೀಡಿ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಭಾರತೀಯ ದಂಡ ಸಂಹಿತೆ ಕಲಂ 377 ಪ್ರಕಾರ ಮೊಕದ್ದ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ