ಬೆಂಗಳೂರು: ಪಾರ್ಟಿ ವೇಳೆ ಕಾಲು ತುಳಿದಿದ್ದಕ್ಕೆ ಇರಿದು ಕೊಲೆ

Published : Oct 01, 2024, 06:25 AM IST
ಬೆಂಗಳೂರು: ಪಾರ್ಟಿ ವೇಳೆ ಕಾಲು ತುಳಿದಿದ್ದಕ್ಕೆ ಇರಿದು ಕೊಲೆ

ಸಾರಾಂಶ

ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕೀರ್ತಿ ಯನ್ನು ಬಂಧಿಸಿದ್ದಾರೆ. ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಲಾಗಿದೆ.

ಬೆಂಗಳೂರು(ಅ.01):  ಪಿತೃಪಕ್ಷದ ಪೂಜೆ ಹಿನ್ನೆಲೆಯಲ್ಲಿ ಮದ್ಯದ ಪಾರ್ಟಿ ಮಾಡುವಾಗ ಕಾಲು ತುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೊಣ್ಣೆನಹಳ್ಳಿ ನಿವಾಸಿ ಮೂರ್ತಿ(52) ಕೊಲೆ ಯಾದ ದುರ್ದೈವಿ. ಭಾನುವಾರ ಸಂಜೆ ಈ ಘಟನೆ ನಡೆದಿದೆ. ಕೊಲೆ ಸಂಬಂಧ ಸೊಣ್ಣೆನಹಳ್ಳಿ ನಿವಾಸಿ ಕೀರ್ತಿ (27) ಎಂಬಾತನ ಬಂಧಿಸಿ ವಿಚಾರ ಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಲೆಯಾದ ಮೂರ್ತಿ ಮತ್ತು ಆರೋಪಿ ಮೂರ್ತಿ ಕೀರ್ತಿ ನೆರೆಹೊರೆಯವರು. ಮೂರ್ತಿ ಹಸು ಸಾಕುವ ಕೆಲಸ ಮಾಡಿದರೆ, ಕೀರ್ತಿ ಹಣಕಾಸು ವ್ಯವಹಾರ ನಡೆಸುತ್ತಿದ್ದ. ಮೂರ್ತಿ ಅವರ ಸಹೋದರನ ಮನೆಯಲ್ಲಿ ಭಾನುವಾರ ಪಿತೃಪಕ್ಷದ ಪೂಜೆ ಇದ್ದಿದ್ದರಿಂದ ಸ್ನೇಹಿತರು, ಸಂಬಂಧಿಕರು, ನೆರೆಹೊರೆಯವರನ್ನು ಊಟಕ್ಕೆ ಆಹ್ವಾನಿಸಿದ್ದರು. ಊಟಕ್ಕೂ ಮುನ್ನ ಮೂರ್ತಿ ಸೇರಿದಂತೆ ಹಬ್ಬಕ್ಕೆ ಬಂದಿದ್ದವರು ಮಾಡುತ್ತಿದ್ದರು. 

ಬೇಕಾ ಇಂಥಾ ಮಕ್ಕಳು? ಹೆತ್ತಮ್ಮನ ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟ ಇಬ್ಬರು ಗಂಡು ಮಕ್ಕಳು

ಮದ್ಯದ ಪಾರ್ಟಿ ಕಾಲು ತುಳಿದಿದ್ದಕ್ಕೆ ಕೊಲೆ: 

ಈ ವೇಳೆ ಮದ್ಯದ ಅಮಲಿನಲ್ಲಿ ಮೂರ್ತಿ, ಆರೋಪಿ ಕೀರ್ತಿಯ ಕಾಲು ತುಳಿದಿದ್ದಾರೆ. ಇದರಿಂದ ಕೋಪಗೊಂಡ ಕೀರ್ತಿ, ಮೂರ್ತಿ ಜತೆಗೆ ಜಗಳ ತೆಗೆದು ಪರಸ್ಪರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರೊಚ್ಚಿಗೆದ್ದ ಕೀರ್ತಿ, ಏಕಾಏಕಿ ಚಾಕು ತೆಗೆದು ಮೂರ್ತಿಯ ಹೊಟ್ಟೆಗೆ ಇರಿದಿದ್ದಾನೆ. ಇದರಿಂದ ತೀವ್ರ ರಕ್ತ ಸ್ರಾವವಾಗಿ ಕುಸಿದು ಬಿದ್ದ ಮೂರ್ತಿಯನ್ನು ಕುಟುಂಬದ ಸದಸ್ಯರು ಕೂಡಲೇ ಸಮೀಪದ ಆಸ್ಪತೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು, ಮಾರ್ಗ ಮಧ್ಯೆಯೇ ಮೂರ್ತಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. 

ವಿಷಯ ತಿಳಿದು ಸ್ಥಳಕ್ಕೆ ಬಂದ ಜ್ಞಾನಭಾರತಿ ಠಾಣೆ ಪೊಲೀಸರು ಪರಿಶೀಲಿಸಿದ್ದಾರೆ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕೀರ್ತಿ ಯನ್ನು ಬಂಧಿಸಿದ್ದಾರೆ. ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ