
ಬೆಂಗಳೂರು(ಸೆ.24): ರಾತ್ರಿ ವೇಳೆ ಐಷಾರಾಮಿ ವಿಲ್ಲಾಗಳಲ್ಲಿ ಕಳವು ಮಾಡುತ್ತಿದ್ದ ಕಳ್ಳನನ್ನು ಕೊತ್ತನೂರು ತಾಣೆ ಪೊಲೀಸರು ಬಂಧಿಸಿ 21 ಲಕ್ಷ ರು.ಮೌಲ್ಯದ 170 ಗ್ರಾಂ ಚಿನ್ನಾಭರಣ, ವಿವಿಧ 32 ವಾಚ್ಗಳು, 3,900 ಅಮೇರಿಕನ್ ಡಾಲರ್ ಹಾಗೂ 5 ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಲಾಗಿದೆ. ತ್ರಿಪುರಾ ಮೂಲದ ಅಮಿತ್ (22) ಆರೋಪಿ.
ಇತ್ತೀಚೆಗೆ ಕೆ.ನಾರಾಯಣಪುರದ ವಿಲ್ಲಾ ನಿವಾಸಿಯೊಬ್ಬರು ರಾತ್ರಿ ಮನೆ ಬಾಗಿಲು ಹಾಕಿದ್ದು, ಮಹಡಿಯ ಬಾಗಿಲು ಹಾಕು ವುದನ್ನು ಮರೆತು ನಿದ್ದೆಗೆ ಜಾರಿದ್ದರು. ತಮ್ಮ ವಾಜ್, ಮೊಬೈಲ್, ಪರ್ಸ್ ಊಟದ ಟೇಬಲ್ ಮೇಲೆ ಇರಿಸಿದ್ದರು. ಮಾರನೇ ದಿನ ಬೆಳಗ್ಗೆ ಪರ್ಸ್, ವಾಚ್ ಕಳುವಾಗಿರುವುದು ಗೊತ್ತಾಗಿದೆ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ವೇಳೆ ಸಿಕ್ಕ ಸುಳಿವು ಹಾಗೂ ಬಾತ್ತೀ ದಾರರು ನೀಡಿದ ಮಾಹಿತಿ ಮೇರೆಗೆ ಕೊತ್ತ ನೂರು ಸಮೀಪದ ಗುಬ್ಬಿ ಕ್ರಾಸ್ ಬಳಿ ಆರೋಪಿಯನ್ನು 1 ವಾಚ್, 1 ಮೊಬೈಲ್ ಹಾಗೂ 1900 ಅಮೆರಿಕನ್ ಡಾಲರ್ ಸಹಿತ ವಕಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಯು ವಿಲ್ಲಾದಲ್ಲಿ ಕಳ್ಳತನ ಮಾಡಿರುವುದು ಹಾಗೂ ನಗರದ ವಿವಿಧೆಡೆ ಐಷಾರಾಮಿ ವಿಲ್ಲಾಗಳಲ್ಲಿ ಕಳವು ಮಾಡಿರುವ ಬಗ್ಗೆ ಬಾಯಿಟ್ಟಿದ್ದಾನೆ.
ಕಳ್ಳತನಕ್ಕೆ ಖದೀಮರ ಹೊಸ ಪ್ಲಾನ್! ಬೀದಿ ದೀಪಗಳ ಕರೆಂಟ್ ವೈರ್ ಕತ್ತರಿಸಿ ಮನೆಗೆ ನುಗ್ತಾರೆ ಹುಷಾರ್!
ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕಳವು ಮಾಲು:
ಅಮಿತ್ ಹೆಚ್ಚಿನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಹನುಮಂ ತನಗರದ ಬಿಳಿಶಿವಾಲೆಯ ಗ್ರಾಮದ ನಿರ್ಮಾಣ ಹಂತದ ಕಟ್ಟಡದಲ್ಲಿ ಇರಿಸಿದ್ದ 31 ವಾಚ್ಗಳು ಹಾಗೂ 4 ಮೊಬೈಲ್ ಜಪ್ತಿ ಮಾಡಲಾಗಿದೆ. ಹೆಣ್ಣೂರು- ಬಾಗಲೂರು ಮುಖ್ಯ ರಸ್ತೆಯ ನಿರ್ಮಾಣ ಹಂತದ ಕಟ್ಟಡ ದಲ್ಲಿ ಬಚ್ಚಿಟ್ಟಿದ್ದ 125 ಗ್ರಾಂ ಚಿನ್ನಾಭರಣ, 1 ವಾಚ್ ಹಾಗೂ 2 ಸಾವಿರ ಅಮೇರಿಕನ್ ಡಾಲರ್ ಜಪ್ತಿ ಮಾಡಲಾಗಿದೆ. ಅಂತೆಯೇ ಆಟೋ ಚಾಲಕನಿಗೆ ಮಾರಾಟ ಮಾಡಿದ್ದ 45 ಮನೆಗಳವು, ಬಾಗಲೂರು 1 ಮನೆಗಳವು ಸೇರಿದಂತೆ ಒಟ್ಟು ಮನೆಗಳವು ಪ್ರಕರಣಗಳು ಪತ್ತೆಯಾಗಿವೆ. ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. 9 ಕಳವು ಪ್ರಕರಣ ಪತ್ತೆ: ಆರೋಪಿಯ ಬಂಧನದಿಂದ ಕೊತ್ತನೂರು ಠಾಣೆ 4. ಮನೆಗಳವು, ಯಲಹಂಕ, ಚಿಕ್ಕಜಾಲ ತಲಾ 2 ಸದ್ಯ ಆರೋಪಿ ಅಮಿತ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಟೊಮೆಟೋ ಬೆಳೆ ನಷ್ಟವಾಗಿದ್ದಕ್ಕೆ 55 ಲ್ಯಾಪ್ಟಾಪ್ ಕದ್ದ ಸಿಸ್ಟಂ ಅಡ್ಮಿನ್..!
ಆರೋಪಿ ತ್ರಿಪುರಾ ಮೂಲದ ಆದಿವಾಸಿ
ತ್ರಿಪುರಾ ಮೂಲದ ಆರೋಪಿ ಅಮಿತ್ ಆದಿವಾಸಿ ಸಮುದಾಯಕ್ಕೆ ಸೇರಿದ್ದಾನೆ. ಏಳು ವರ್ಷದ ಹಿಂದೆ ನಗರಕ್ಕೆ ಬಂದು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಕಿದ್ದ, ಇತ್ತೀಚೆಗೆ ಕೊತ್ತನೂರಿನಲ್ಲಿ ನೀರಿನ ಟ್ಯಾಂಕರ್ನಲ್ಲಿ ನೀರು ತುಂಬಿಸುವ ಕೆಲಸ ಮಾಡುತ್ತಿದ್ದ. ಈತನಿಗೆ ಯಾವುದೇ ಮನೆ ಇಲ್ಲ. ನಿರ್ಮಾಣ ಹಂತದ ಕಟ್ಟಡಗಳಲ್ಲಿ ರಾತ್ರಿ ವೇಳೆ ತಂಗುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.
ರುಚಿಕಟ್ಟಾದ ಊಟಕ್ಕಾಗಿ ವಿಲ್ಲಾಗಳಿಗೆ ನುಗ್ಗುತ್ತಿದ್ದ!
ಆರೋಪಿ ಅಮಿತ್ ರುಚಿಕಟ್ಟಾದ ಊಟಕ್ಕಾಗಿ ವಿಲ್ಲಾಗಳಿಗೆ ರಾತ್ರಿ ವೇಳೆ ನುಗ್ಗುತ್ತಿದ್ದ. ಅಡುಗೆ ಮನೆಗೆ ತೆರಳಿ ಹೊಟ್ಟೆ ತುಂಬಾ ಊಟ ಮಾಡಿ ಬಳಿಕ ಕೈಗೆ ಸಿಕ್ಕ ಬೆಲೆಬಾಳುವ ವಸ್ತುಗಳು, ನಗದು, ಚಿನ್ನಾ ಭರಣ ಕಳವು ಮಾಡುತ್ತಿದ್ದ. ಆದಿವಾಸಿ ಸಮುದಾಯಕ್ಕೆ ಸೇರಿರುವುದರಿಂದ ಸುಲಭವಾಗಿ ಮರ ಏರುವುದು, ಗೋಡೆ ಹತ್ತುವುದು ಕರಗತವಾಗಿದೆ. ಹೀಗಾಗಿ ವಿಲ್ಲಾಗಳನ್ನೇ ಟಾರ್ಗೆಟ್ ಮಾಡಿ ರಾತ್ರಿ ವೇಳೆ ನುಗ್ಗಿ ಕಳವು ಮಾಡಿ ಪರಾರಿಯಾಗುತ್ತಿದ್ದ ಕದ್ದ ಮಾಲುಗಳನ್ನು ನಿರ್ಮಾಣ ಹಂತದ ಕಟ್ಟಡಗಳಲ್ಲಿ ಬಚ್ಚಿಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ