
ಯಮಕನಮರಡಿ(ಜ.05): ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೊಲೀಸರು ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.
ಕಲ್ಲಪ್ಪ ಉರ್ಫ ಕಲ್ಯಾಣಿ ಜ್ಯೋತಿಬಾ ಮೋರೆ ( 44) ಬಂಧಿತ ಆರೋಪಿ. ಅಂಗನವಾಡಿ ಕೇಂದ್ರ ಮಕ್ಕಳು ತಮ್ಮ ಮನೆಯ ಬಳಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಆರೋಪಿ ಕಲ್ಯಾಣಿ, ಅಂಗನವಾಡಿ ಕಾರ್ಯಕರ್ತೆ ಮೀರಾ ಮೋರೆ ಜೊತೆಗೆ ಜಗಳ ತೆಗೆದಿದ್ದ. ಇಬ್ಬರ ನಡುವೆ ವಾಗ್ವಾದ ನಡೆಯುತ್ತಿದ್ದ ವೇಳೆ ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ (50) ಮಧ್ಯ ಪ್ರವೇಶಿಸಿ ಜಗಳ ಬಿಡಿಸಲು ಮುಂದಾದ ವೇಳೆ ಆತ ಕುಡುಗೋಲಿನಿಂದ ಕಲ್ಲೆ ನಡೆಸಿ ಆಕೆಯ ಮೂಗನ್ನು ಕತ್ತರಿಸಿದ್ದ.
ಮನೆ ಬಳಿ ಮಕ್ಕಳು ಮೂತ್ರ ಮಾಡಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಪಾಪಿಗಳು!
ಗಂಭೀರಗಾಯಗೊಂಡಿದ್ದ ಸಂತ್ರಸ್ತೆಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ, ಮೂಗಿನ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಸಂತ್ರಸ್ತೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಕೊನೆಗೂ ಪೊಲೀಸರು ಆರೋಪಿ ಕಲ್ಲಪ್ಪನ್ನು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ