Belagavi: ವನ್ಯಜೀವಿಗಳ ಅಂಗಾಂಗ ಸಾಗಾಟ : ಓರ್ವನ ಬಂಧನ

Published : Apr 12, 2023, 11:30 PM IST
Belagavi: ವನ್ಯಜೀವಿಗಳ ಅಂಗಾಂಗ ಸಾಗಾಟ : ಓರ್ವನ ಬಂಧನ

ಸಾರಾಂಶ

ವನ್ಯಜೀವಿಗಳ ಅಂಗಾಂಗ ಸಾಗಾಟ ಮಾಡುತ್ತಿದ್ದ ಅಂತಾರಾಜ್ಯದ ವ್ಯಕ್ತಿಯೋರ್ವನನ್ನು ಬಂಧಿಸಿದ ಅರಣ್ಯ ಸಂಚಾರಿ ದಳದ (ಸಿಐಡಿ) ಅಧಿಕಾರಿಗಳು, ಆತನಿಂದ ಅಪಾರ ಪ್ರಮಾಣದ ವನ್ಯಜೀವಿಗಳ ಅಂಗಾಂಗವನ್ನು ವಶಪಡಿಸಿಕೊಂಡಿದ್ದಾರೆ. 

ಬೆಳಗಾವಿ (ಏ.12): ವನ್ಯಜೀವಿಗಳ ಅಂಗಾಂಗ ಸಾಗಾಟ ಮಾಡುತ್ತಿದ್ದ ಅಂತಾರಾಜ್ಯದ ವ್ಯಕ್ತಿಯೋರ್ವನನ್ನು ಬಂಧಿಸಿದ ಅರಣ್ಯ ಸಂಚಾರಿ ದಳದ (ಸಿಐಡಿ) ಅಧಿಕಾರಿಗಳು, ಆತನಿಂದ ಅಪಾರ ಪ್ರಮಾಣದ ವನ್ಯಜೀವಿಗಳ ಅಂಗಾಂಗವನ್ನು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರಸ ನಾಸೀಕ್‌ ಜಿಲ್ಲೆಯ ಅಸವಲದಾರಾ ಗ್ರಾಮದ ನಿವಾಸಿ ಪವನ್‌ ಜಾಫರ್‌ ಭೋಸಲೆ (60) ಬಂಧಿತ. 

ಈತನಿಂದ 807 ಉಡದ ಶಿಶ್ನಗಳು, 116 ಇಂದ್ರಜಾಲಗಳು, 02 ಕಾಡ ಬೆಕ್ಕಿನ ಪಾದಗಳು, 02 ಕಾಡ ಬೆಕ್ಕಿನ ಉಗುರುಗಳು, 03 ಕರಡಿಯ ಉಗುರುಗಳು, 28 ನೀರು ಪಕ್ಷಿಯ ಉಗುರುಗಳು, 02 ಉಡದ ಕಾಲುಗಳು, 73 ಗೂಬೆಯ ಪುಕ್ಕಗಳು, 04 ಕರಡಿಯ ಹಲ್ಲುಗಳು, 32 ಮುಂಗಸಿಯ ಕಾಲುಗಳು, 07 ಮುಂಗುಸಿಯ ದವಡೆಗಳು, 16 ಮುಂಗುಸಿಯ ಚರ್ಮದಿಂದ ಮಾಡಿ ಉಂಡೆಗಳು, 26 ಕಾಡು ಹಂದಿಯ ಹಲ್ಲುಗಳು, 03 ಅಪರಿಚಿತ ಕಾಡು ಪ್ರಾಣಿಗಳ ಉಗುರುಗಳು,04 ಕೃಷ್ಣಮೃಗ ಕೊಂಬುಗಳು, 02 ಕೃಷ್ಣಮೃಗ ಕೊಂಬು ಸಮೇತ ಇರುವ ಬುರುಡೆಗಳು ಹಾಗೂ 07 ಕೃಷ್ಣಮೃಗದ ಚರ್ಮಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಮ​ನ​ಗರ ಕ್ಷೇತ್ರ​ದಲ್ಲಿ ಕಾಂಗ್ರೆಸ್‌-ಜೆಡಿಎಸ್‌​ ಅಭ್ಯ​ರ್ಥಿ​ಗ​ಳಿಗೆ ಅಳಿವು ಉಳಿ​ವಿನ ಪ್ರಶ್ನೆ?

ಬಂಧಿತ ಆರೋಪಿ ಪವನ್‌ ಭೋಸಲೆ ಮಂಗಳವಾರ ಮಧ್ಯಾಹ್ನ ವನ್ಯಜೀವಿಗಳ ಅಂಗಾಂಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಾಗಲೂರ ಗ್ರಾಮದ ಬಸ್‌ ನಿಲ್ದಾಣದ ಹತ್ತಿರ ದಾಳಿ ನಡೆಸಿದ್ದಾರೆ.

ಬೈಕ್‌ ಕಳ್ಳರ ಪತ್ತೆ, 18 ಬೈಕ್‌ಗಳು ವಶ: ಚಿಟಗುಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳುವಾದ 10 ದ್ವಿಚಕ್ರ ವಾಹನ, ಟ್ಯಾಂಕರ್‌ ಟೈರ್‌, ರೈತರ 350 ಕೆ.ಜಿ ಸೋಯಾಬಿನ್‌, 250 ಕೆ.ಜಿ ಅಲಸಂದರೆ ಹಾಗೂ 840 ಕೆ.ಜಿ ತೊಗರಿ ಬೆಳೆಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಚಿಟಗುಪ್ಪ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ 7 ಕಳುವು ಪ್ರಕರಣಗಳಲ್ಲಿ ಹಾಗೂ ತೆಲಂಗಣಾದ ಜಹೀರಾಬಾದ್‌ನ 3 ಪ್ರಕರಣಗಳಲ್ಲಿ, ಕಲಬುರಗಿ ಜಿಲ್ಲೆಯ ಚಿಂಚೋಳಿ, ಕೂಡ್ಲಿ 2 ಪ್ರಕರಣಗಳಲ್ಲಿ ಹಾಗೂ ಬಸವಕಲ್ಯಾಣ ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಕಳುವಾದ ಒಂದು ಪ್ರಕರಣ ಹೀಗೆ ಒಟ್ಟು 13 ಪ್ರಕರಣಗಳಲ್ಲಿ ಕಳುವಾದ 18 ಬೈಕ್‌ಗಳು ಹಾಗೂ 350 ಕೆ.ಜಿ ಸೋಯಾಬಿನ್‌, 250 ಕೆ.ಜಿ ಅಲಸಂದರೆ ಮತ್ತು 840 ಕೆ.ಜಿ ತೊಗರಿ ಜಪ್ತಿ ಮಾಡಿಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನ ಆರೋಪಿತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಿಜೆಪಿಯಿಂದ ಟಿಕೆಟ್ ದೊರೆತ ಸಂತೋಷದ ಹೊತ್ತಲ್ಲೇ ಭಟ್ಕಳ ಶಾಸಕ ಸುನೀಲ್ ನಾಯ್ಕ್‌ಗೆ ಪಿತೃ ವಿಯೋಗ!

18 ದ್ವಿಚಕ್ರ ವಾಹನದ ಅಂದಾಜು 15.55ಲಕ್ಷ ರು, 1.18 ಲಕ್ಷ ಮೌಲ್ಯದ ರೈತರ ದವಸ-ಧಾನ್ಯ, ನಗದು 20 ಸಾವಿರ ಜಪ್ತಿ ಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಅವರು ಮಾಹಿತಿ ನೀಡಿದರು. ಈ ಕುರಿತಂತೆ ಪೊಲೀಸ್‌ ಅಧೀಕ್ಷಕ ಚನ್ನಬಸವಣ್ಣ ಎಸ್‌ಎಲ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಮಹೇಶ ಮೇಘಣ್ಣನವರ, ಎಸಿಪಿ ಶಿವಾಂಶು ರಜಪೂತ ಅವರ ಮಾರ್ಗದರ್ಶನ ಹಾಗೂ ಚಿಟಗುಪ್ಪ ಸಿಪಿಐ ಮಹೇಶ ಗೌಡ ಪಾಟೀಲ್‌ ಪಿಎಸ್‌ಐ ಮಹೇಂದ್ರಕುಮಾರ, ಪಿಎಸ್‌ಐ ಹುಸೇನಸಾಬ್‌ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!