ಕೊಪ್ಪಳ: ಕೋವಿಡ್‌ ರೋಗಿಗೆ ಆಹಾರ ನೀಡದೆಕೊಲೆ ಆರೋಪ: ದೂರು ದಾಖಲು!

Published : Jan 24, 2024, 05:18 AM IST
ಕೊಪ್ಪಳ: ಕೋವಿಡ್‌ ರೋಗಿಗೆ ಆಹಾರ ನೀಡದೆಕೊಲೆ ಆರೋಪ: ದೂರು ದಾಖಲು!

ಸಾರಾಂಶ

ನಗರದ ಹೊಸಪೇಟೆ ರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ಸರಿಯಾಗಿ ಆಹಾರ ಮತ್ತು ನೀರು ನೀಡದೆ, ಸಂಬಂಧಿಕರು ಮತ್ತು ಇನ್ನೂ ಕೆಲವರು ಸೇರಿ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಹಿನ್ನೆಲೆ ಪ್ರಕರಣ ದಾಖಲಾಗಿದೆ.

ಕೊಪ್ಪಳ (ಜ.24): ನಗರದ ಹೊಸಪೇಟೆ ರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ಸರಿಯಾಗಿ ಆಹಾರ ಮತ್ತು ನೀರು ನೀಡದೆ, ಸಂಬಂಧಿಕರು ಮತ್ತು ಇನ್ನೂ ಕೆಲವರು ಸೇರಿ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆಯ ಶಾಂತಪ್ಪ ಅವರು ನ್ಯಾಯಾಲಯದಲ್ಲಿ ದಾಖಲಿಸಿದ ಖಾಸಗಿ ದೂರಿನ ಮೇರೆಗೆ 11 ಮಂದಿ ವಿರುದ್ಧ ಕೊಪ್ಪಳದಲ್ಲಿ ದೂರು ದಾಖಲಾಗಿದೆ.

ಏನಿದು ಪ್ರಕರಣ?: ಹಂಪಸಾಗರದ ಪ್ರವೀಣ ಎಂಬವರು ೨೦೨೧ರ ಮೇ ತಿಂಗಳಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಅವರ ಸಾವಿಗೆ ಆಸ್ಪತ್ರೆ ಸಿಬ್ಬಂದಿ ಆಹಾರ ಮತ್ತು ನೀರು ನೀಡದಿರುವುದೇ ಕಾರಣ. ಇದು ಸಂಚಿನಿಂದಲೇ ಮಾಡಿರುವ ಕೊಲೆ ಎಂದು ಆರೋಪಿಸಲಾಗಿದೆ. ಪ್ರವೀಣ ಹಾಗೂ ಅವರ ಸಹೋದರ ಪ್ರದೀಪ್‌ ನಡುವೆ ಹಣಕಾಸಿನ ವ್ಯವಹಾರ ವಿಷಯವಾಗಿ ಜಗಳವಾಗಿದ್ದೇ ಈ ಕೊಲೆಗೆ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಜೆಎನ್‌.1 ವೈರಸ್ ಹಾವಳಿ ಹೆಚ್ಚಳ, 1000 ಗಡಿ ದಾಟಿದ ಸೋಂಕಿತರ ಸಂಖ್ಯೆ; ದೇಶದಲ್ಲೇ ಕರ್ನಾಟಕ ನಂ.1

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!