ಮೊಳಕಾಲ್ಮೂರು: ರಿಯಲ್ ಎಸ್ಟೇಟ್ ಉದ್ಯಮಿಗೆ ಜಮೀನು ಮಾಲೀಕನ ಮೇಲೆ ಆ್ಯಸಿಡ್ ದಾಳಿ

Suvarna News   | Asianet News
Published : Feb 14, 2021, 12:58 PM IST
ಮೊಳಕಾಲ್ಮೂರು: ರಿಯಲ್ ಎಸ್ಟೇಟ್ ಉದ್ಯಮಿಗೆ ಜಮೀನು ಮಾಲೀಕನ ಮೇಲೆ ಆ್ಯಸಿಡ್ ದಾಳಿ

ಸಾರಾಂಶ

ಕಾರಿನ ಮೇಲೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳ ತಂಡ| ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸೂಲೇನಹಳ್ಳಿ ಬಳಿ ನಡೆದ ಘಟನೆ| ಘಟನೆಯಲ್ಲಿ ಸುಟ್ಟು ಭಸ್ಮವಾದ ಕಾರು| ಘಟನೆ ಬಳಿಕ ಪರಾರಿಯಾದ ಆರೋಪಿಗಳು| 

ಚಿತ್ರದುರ್ಗ(ಫೆ.14): ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ಜಮೀನು ನೀಡದ ಹಿನ್ನಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳ ತಂಡವೊಂದು ಜಮೀನು ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಯತ್ನಿಸಿರುವ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಸೂಲೇನಹಳ್ಳಿ ಬಳಿ ಘಟನೆ ನಿನ್ನೆ(ಶನಿವಾರ) ನಡೆದಿದೆ. 

ಆಂಧ್ರ ಪ್ರದೇಶದ ಹಿಂದೂಪುರ‌ ಮೂಲದ ಜಮೀನು ಮಾಲೀಕ ವೇಣುಗೋಪಾಲ್ ಎಂಬುವರ ಮೇಲೆ ಹಿಂದೂಪುರ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಸುರೇಶ್ ಹಾಗೂ ಆಂಜನೇಯ, ಚೌಡಪ್ಪ ಸೇರಿ ಐವರ ತಂಡದಿಂದ ಕೃತ್ಯ ನಡೆಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ವೇಣುಗೋಪಾಲ್ ಅವರ ತಂದೆ ಸುರೇಶ್‌ಗೆ ಜಮೀನು‌ ಮಾರಿದ್ದರು. ತಂದೆಯ ನಿರ್ಧಾರಕ್ಕೆ ಒಪ್ಪದೆ ಜಮೀನು ಮಾರಾಟಕ್ಕೆ ವೇಣುಗೋಪಾಲ್ ನಿರಾಕರಿಸಿದ್ದರು. ಜಮೀನು ನೀಡದಕ್ಕೆ ವೇಣುಗೋಪಾ ಅವರ ಕಾರು ಹಿಂಬಾಲಿಸಿಕೊಂಡು ಬಂದು ಏಕಾಏಕಿ ಆ್ಯಸಿಡ್ ಎರಚಿ ದಾಳಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. 

ಆ್ಯಸಿಡ್ ದಾಳಿ ಪ್ರಕರಣ ನಿರ್ಲಕ್ಷ್ಯಿಸಿದ ಪೊಲೀಸ್ ಅಮಾನತು

ಘಟನೆಯಲ್ಲಿ ಕಾರು ಸುಟ್ಟು ಭಸ್ಮವಾಗಿದ್ದು, ವೇಣುಗೋಪಾಲ್‌ಗೆ ಗಂಭೀರವಾದ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗೆಂದು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಳಕಾಲ್ಮೂರಿನಿಂದ ಚಳ್ಳಕೆರೆಗೆ ಹೋಗುವ ವೇಳೆ ಕಾರು ಅಡ್ಡಗಟ್ಟಿ ದಾಳಿ ನಡೆಸಲಾಗಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೋಲೀಸರ ಹುಡುಕಾಟ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!