ಹುಟ್ಟೂರು ಪೊನ್ನಂಪೇಟೆಯಲ್ಲಿ ನಟ ದರ್ಶನ್ ಕ್ರೌರ್ಯ, ಹೋಂ ಸ್ಟೇಯಲ್ಲಿ ಕೆಲಸದಾಕೆಗೆ ಸಿಗರೇಟ್‌ನಿಂದ ಸುಟ್ಟು ಹಲ್ಲೆ!

Published : Jun 15, 2024, 06:47 PM IST
ಹುಟ್ಟೂರು ಪೊನ್ನಂಪೇಟೆಯಲ್ಲಿ ನಟ ದರ್ಶನ್ ಕ್ರೌರ್ಯ, ಹೋಂ ಸ್ಟೇಯಲ್ಲಿ ಕೆಲಸದಾಕೆಗೆ ಸಿಗರೇಟ್‌ನಿಂದ ಸುಟ್ಟು ಹಲ್ಲೆ!

ಸಾರಾಂಶ

ನಟ ದರ್ಶನ್ ತೋರಿಸಿದ್ದಾರೆ ಎನ್ನಲಾದ ಕ್ರೌರ್ಯಕ್ಕೆ ಹುಟ್ಟೂರು ಪೊನ್ನಂಪೇಟೆಯಲ್ಲಿ ದರ್ಶನ್ ಮಾವ ಮತ್ತು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಮಡಿಕೇರಿ (ಜೂ.15): ನಟ ದರ್ಶನ್ ತೋರಿಸಿದ್ದಾರೆ ಎನ್ನಲಾದ ಕ್ರೌರ್ಯಕ್ಕೆ ಹುಟ್ಟೂರು ಪೊನ್ನಂಪೇಟೆಯಲ್ಲಿ ದರ್ಶನ್ ಮಾವ ಮತ್ತು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ತನ್ನ ಹುಟ್ಟೂರಿನಲ್ಲಿ ಕೂಡ ತಾಯಿ ಮೀನಾ ಮತ್ತು ನಟ ದರ್ಶನ್ ಕ್ರೌರ್ಯ ನಡೆಸಿದ್ದರು ಎನ್ನಲಾಗಿದೆ.

ದರ್ಶನ್ ಮತ್ತು ತಾಯಿ ದಶಕದ ಹಿಂದೆ, ತಾವು ಹುಟ್ಟಿ ಬೆಳೆದ ಮನೆಯನ್ನೇ ಕೆಡವಿದ ಪ್ರಕರಣದ ಆರೋಪ ಎದುರಿಸುತ್ತಿದ್ದಾರೆ. ತಾನು ಬೆಳೆದ ಮನೆಯನ್ನೇ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದರು. ಆಸ್ತಿ ವಿಚಾರವಾಗಿ ಸೋದರ ಮಾವಂದಿರ ಜೊತೆ ಗಲಾಟೆ ಮಾಡಿಕೊಂಡಿದ್ದರು. ತಾಯಿ ಮೀನಾ ಜೊತೆ 10 ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಪ್ರಕರಣ ಈಗಲೂ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

ಬದುಕು ಸೀರಿಯಲ್‌ನಲ್ಲಿ ಗಂಡನಾಗಿದ್ದವನನ್ನೇ ರಿಯಲ್‌ ಲೈಫ್ ನಲ್ಲಿ ಕೈ ಹಿಡಿದ ನಟಿ ಸಿರಿ!

ಕೆಲ ವರ್ಷಗಳ ಹಿಂದೆ ಹೆಂಡತಿ ಜೊತೆ ಗಲಾಟೆ ಮಾಡಿಕೊಂಡು ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಈಗ ಪವಿತ್ರಗೌಡ ಜೊತೆ ಸಂಬಂಧ ಇಟ್ಟುಕೊಂಡ ಕಾರಣ ಈ ಪರಿಸ್ಥಿತಿ ಬಂದಿದೆ. ಈತ ಶೌರ್ಯದ ಮೂವಿ ಮಾಡಿ ಕ್ರೌರ್ಯ ಮೆರೆದಿದ್ದಾನೆ. ಆತ ಕೊಲೆ ಮಾಡುವ ಹಂತಕ್ಕೆ ಹೋಗಬಾರದಿತ್ತು ಎಂದು ನಟ ದರ್ಶನ್ ಮಾವ ಟಿ ಎಲ್ ಶ್ರೀನಿವಾಸ್ ಪೊನ್ನಪೇಟೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೊಲೆ ಆಗಿರುವ ವ್ಯಕ್ತಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ನಾವು ಎತ್ತಿ ಆಡಿಸಿ ಬೆಳೆಸಿದ ದರ್ಶನ್ ಕೊಲೆಯಲ್ಲಿ ಭಾಗಿರುವುದು ಬೇಸರವಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಡಿ ಗ್ಯಾಂಗ್‌ನಲ್ಲಿ 19 ಮಂದಿ, ಇಂದು ಜೈಲಿಗೆ?, ಪರಪ್ಪನ ಅಗ್ರಹಾರದಲ್ಲಿನ ದರ್ಶನ್ ಆಪ್ತ ರೌಡಿಶೀಟರ್‌ಗಳು ಬೇರೆಡೆಗೆ!

ಮತ್ತೊಂದು ಪ್ರಕರಣದಲ್ಲಿ ಕೊಡಗಿನ ಹೋಂ ಸ್ಟೇ ಒಂದರಲ್ಲಿ ಮಹಿಳೆ ಮೇಲೆ ದರ್ಶನ್ ಕ್ರೌರ್ಯ ಮೆರೆದಿದ್ದರು. ಸ್ನೇಹಿತರ ಜೊತೆ ಹೋಂ ಸ್ಟೇಯಲ್ಲಿ ಉಳಿದಿದ್ದ ದರ್ಶನ್, ಹೋಂ ಸ್ಟೇಯಲ್ಲಿ ಕೆಲಸ ಮಾಡುವ ಮಹಿಳೆಗೆ ಸಿಗರೇಟ್ ನಿಂದ ಸುಟ್ಟು ಹಲ್ಲೆ ಮಾಡಿರುವ ಆರೋಪ‌ ಇದೆ ಎಂದು ದರ್ಶನ್ ಹುಟ್ಟೂರು ಪೊನ್ನಂಪೇಟೆಯಲ್ಲಿ ಕೆಲವು ಸ್ಥಳೀಯರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇತನ್ ಸಿಯಾಗೆ ನೀಡಿದ್ದ 1 ಕೋಟಿ ಎಲ್ಲಿ ಹೋಯ್ತು? ಪಾಸ್ಪೋರ್ಟ್ ಕದ್ದ ಸತ್ಯ ಬಿಚ್ಚಿಟ್ಟ ಡ್ರೈವರ್
ಕಿಸ್​ ಕೊಡುತ್ತಲೇ ಹೋಟೆಲ್​ ರೂಮೊಳಗೆ ಹೋದಳು: ಬರುವಾಗ ಸೂಟ್​ಕೇಸ್​​ ಜೊತೆ ಒಬ್ಬಳೇ ಬಂದಳು- ಆಗಿದ್ದೇನು