ಕನ್ನಡದಲ್ಲಿ ಮಾತಾಡಿದ್ದಕ್ಕೆ ಹಲ್ಲೆ: ನಟಿ ಹರ್ಷಿಕಾ, ಭುವನ್‌ ದೂರು

Published : Apr 21, 2024, 12:07 PM IST
ಕನ್ನಡದಲ್ಲಿ ಮಾತಾಡಿದ್ದಕ್ಕೆ ಹಲ್ಲೆ: ನಟಿ ಹರ್ಷಿಕಾ, ಭುವನ್‌ ದೂರು

ಸಾರಾಂಶ

ತಮ್ಮ ಮೇಲೆ ಹಲ್ಲೆ ಕನ್ನಡ ಮಾತನಾಡಿದ ಕಾರಣಕ್ಕೆ ಹಲ್ಲೆ ನಡೆದಿದೆ ಎಂದಿದ್ದ ನಟಿ ಹರ್ಷಿಕಾ ಪೂಣಚ್ಚ ದಂಪತಿ, ಘಟನೆ ಸಂಬಂಧ ನಗರದ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಶನಿವಾರ ದೂರು ಸಲ್ಲಿಸಿದ್ದಾರೆ. 

ಬೆಂಗಳೂರು (ಏ.21): ತಮ್ಮ ಮೇಲೆ ಹಲ್ಲೆ ಕನ್ನಡ ಮಾತನಾಡಿದ ಕಾರಣಕ್ಕೆ ಹಲ್ಲೆ ನಡೆದಿದೆ ಎಂದಿದ್ದ ನಟಿ ಹರ್ಷಿಕಾ ಪೂಣಚ್ಚ ದಂಪತಿ, ಘಟನೆ ಸಂಬಂಧ ನಗರದ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಶನಿವಾರ ದೂರು ಸಲ್ಲಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತ (ಪೂರ್ವ) ರಮಣ್ ಗುಪ್ತಾ ಅವರನ್ನು ಭೇಟಿಯಾದ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ಭುವನ್, ತಮ್ಮ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ನಮ್ಮ ದೂರಿಗೆ ಹೆಚ್ಚುವರಿ ಆಯುಕ್ತರು ಸ್ಪಂದಿಸಿದ್ದಾರೆ. ಈ ಬಗ್ಗೆ ಎಫ್‌ಐಆರ್ ದಾಖಲಿಸಿ ಕ್ರಮ ಜರುಗಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಆಯುಕ್ತರು ಭೇಟಿ ಸಾಧ್ಯವಾಗದ ಕಾರಣ ಹೆಚ್ಚುವರಿ ಆಯುಕ್ತರಿಗೆ ದೂರು ನೀಡಿದ್ದೇವೆ ಎಂದು ನಟ ಭುವನ್ ಹೇಳಿದರು. ಘಟನೆ ನಡೆದ ದಿನವೇ ದೂರು ನೀಡಿದರೆ ಘಟನೆಗೆ ಬೇರೆ ರೂಪ ಸಿಗುತ್ತದೆ ಎಂಬ ಕಾರಣಕ್ಕೆ ದೂರು ಕೊಟ್ಟಿರಲಿಲ್ಲ. ಈ ಬಗ್ಗೆ ಸಂಬಂಧಿಕರು ಹಾಗೂ ಹಿತೈಷಿಗಳ ಸಲಹೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಯಿತು. ಈಗ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ತಾಲಿಬಾನ್‌ ಆಡಳಿತ ಇದೆಯೇ?: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ನನಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇನೆ. ಆದರೆ ದೂರಿನ ಹಿಂದೆ ಯಾವುದೇ ರಾಜಕೀಯ ಅಜೆಂಡಾ ಇಲ್ಲ. ನಮಗೆ ದೂರನ್ನು ಯಾರೂ ಬರೆದುಕೊಟ್ಟಿಲ್ಲ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದ‌‌ ನಾನು‌ ಕನ್ನಡ ಮಾತನಾಡಬಾರದೆ ಎಂದು ಅಸಮಾಧಾನದಲ್ಲಿ ಪಾಕಿಸ್ತಾನದಲ್ಲಿ‌ ಇದ್ದೇವಾ ಎಂಬ ರೀತಿಯಲ್ಲಿ ‘ಎಕ್ಸ್’ ತಾಣದಲ್ಲಿ ಪೋಸ್ಟ್ ಮಾಡಿದ್ದೇ. ಆದರೆ ಬೆಂಗಳೂರಿನ ಕಾನೂನು‌ ಸುವ್ಯವಸ್ಥೆ ಬಗ್ಗೆ ದೂಷಣೆ ಮಾಡಿಲ್ಲ ಎಂದು ಹರ್ಷಿಕಾ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!