ದರ್ಶನ್ ಬಂಧನ ಬೆನ್ನಲ್ಲೇ ಒಡೆದ ಹೃದಯ ಸ್ಟೇಟಸ್‌ ಹಾಕಿ ಡಿಲೀಟ್‌ ಮಾಡಿದ ನಟಿ ರಕ್ಷಿತಾ, ರಮ್ಯಾ ರೀಟ್ವೀಟ್!

Published : Jun 11, 2024, 03:11 PM IST
ದರ್ಶನ್ ಬಂಧನ ಬೆನ್ನಲ್ಲೇ ಒಡೆದ ಹೃದಯ ಸ್ಟೇಟಸ್‌ ಹಾಕಿ ಡಿಲೀಟ್‌ ಮಾಡಿದ ನಟಿ ರಕ್ಷಿತಾ, ರಮ್ಯಾ ರೀಟ್ವೀಟ್!

ಸಾರಾಂಶ

ನಟ ದರ್ಶನ್‌ ಬಂಧನ ಬೆನ್ನಲ್ಲೇ ಅತ್ಯಾಪ್ತ ಗೆಳತಿ ರಕ್ಷಿತಾ ಪ್ರೇಮ್ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇದರ ಜೊತೆಗೆ ನಟಿ ರಮ್ಯಾ ಕೂಡ ಬಂಧನದ ಪೋಸ್ಟ್ ರೀಟ್ವೀಟ್ ಮಾಡಿದ್ದಾರೆ.

ಬೆಂಗಳೂರು (ಜೂ.11): ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದ ಹಿನ್ನೆಲೆ ನಟ ದರ್ಶನ್, ನಟಿ ಪವಿತ್ರಾ ಗೌಡ ಮತ್ತು ನಟನ ಆಪ್ತರು ಸೇರಿ 10ಕ್ಕೂ ಹೆಚ್ಚು ಮಂದಿ  ಅರೆಸ್ಟ್ ಆದ ಬೆನ್ನಲ್ಲೇ ದರ್ಶನ್‌ ಅವರ ಅತ್ಯಾಪ್ತ ಗೆಳತಿ ರಕ್ಷಿತಾ ಪ್ರೇಮ್ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇನ್ನು ಇವರ ಜೊತೆ ನಟಿಸಿದ್ದ ಸ್ಯಾಂಡಲ್‌ವುಡ್‌ ಕ್ವೀನ್ ನಟಿ ರಮ್ಯಾ ದರ್ಶನ್ ಅರೆಸ್ಟ್ ಆದ ಪೋಸ್ಟ್ ಅನ್ನು ರಿಪೋಸ್ಟ್ ಮಾಡಿದ್ದಾರೆ.

ಜಿಮ್‌ ಮಾಡ್ತಿದ್ದ ನಟನಿಗೆ ಜೀಪು ಹತ್ತು ಎಂದ ಪೊಲೀಸ್‌, ಕಾರಲ್ಲಿ ಬರುವೆ ಎಂದಿದ್ಯಾಕೆ ದರ್ಶನ್?

ದರ್ಶನ್ ಕೊಲೆ ಕೇಸ್ ನಲ್ಲಿ ಆರೋಪಿ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ನಟಿ ರಕ್ಷಿತಾ ಪ್ರೇಮ್ ಸ್ಟೇಟಸ್ ಪೋಸ್ಟ್ ಮಾಡಿದ್ದಾರೆ. ಒಡೆದ ಹೃದಯ ಪೋಸ್ಟ್ ಹಾಕಿರುವ ರಕ್ಷಿತಾ, ನಾನು ತುಂಬಾ ಹೇಳಲು ಬಯಸುತ್ತೇನೆ....ಆದ್ರೆ ಹೇಳಲು ಆಗ್ತಿಲ್ಲವೆಂದು ಬರೆದುಕೊಂಡಿದ್ದಾರೆ. ಆದರೆ ಸ್ವಲ್ಪ ಹೊತ್ತಲ್ಲೇ ಆ ಪೋಸ್ಟ್ ಅನ್ನು  ರಕ್ಷಿತಾ ಡಿಲೀಟ್‌ ಮಾಡಿದ್ದಾರೆ. ಯಾಕೆ ಡಿಲೀಟ್‌ ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ.

ಕೊಲೆ ಪ್ರಕರಣದಲ್ಲಿ ದರ್ಶನ್‌ ಅರೆಸ್ಟ್ ಬೆನ್ನಲ್ಲೇ ಎರಡನೇ ಪತ್ನಿ ಪವಿತ್ರಾ ಗೌಡ ಬಂಧನ!

ಇನ್ನು ನಟಿ, ಮಾಜಿ ಸಂಸದೆ ರಮ್ಯಾ ಕೂಡ ದರ್ಶನ್ ಬಂಧನದ ಸುದ್ದಿಯನ್ನು ರೀಟ್ವೀಟ್‌ ಮಾಡಿದ್ದಾರೆ. ಇದರ ಅರ್ಥವೇನು ಎಂಬುದು ಇನ್ನೂ ತಿಳಿದಿಲ್ಲ. ಆದರೆ ರಮ್ಯಾ ರೀಟ್ವೀಟ್ ಗೆ, ಈ ವ್ಯಕ್ತಿ ಪ್ರಶ್ನಾತೀತವಾಗಿದ್ದಾನೆ. ಸಮಾಜಕ್ಕೆ ಇವನಿಂದ ಕಳವಳವಾಗಿದೆ. ನಿಮ್ಮ ಧ್ವನಿ ಗುರುತಿಸಲ್ಪಡುತ್ತದೆ. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಇನ್ನು ಕೆಲವರು ಯಾರೇ ಆಗಿರಲಿ ಕಾನೂನಿನ ಪ್ರಕಾರ ಶಿಕ್ಷೆ ಆಗಲೇಬೇಕು ಎಂದು ಬರೆದುಕೊಂಡಿದ್ದಾರೆ.

ದರ್ಶನ್ ಮತ್ತು ರಕ್ಷಿತಾ ಸ್ಯಾಂಡಲ್‌ವುಡ್‌ನಲ್ಲಿ ಒಂದು ಕಾಲದ ಹಿಟ್‌ ಜೋಡಿಯಾಗಿದ್ದರು. ಈಗ ಸಿನೆಮಾಗಳಲ್ಲಿ ನಟಿ ರಕ್ಷಿತಾ ನಟಿಸುತ್ತಿಲ್ಲವಾದರೂ ಅವರಿಬ್ಬರೂ ಆತ್ಮೀಯ ಗೆಳೆತನ ಹೊಂದಿದ್ದಾರೆ. ಇನ್ನು ರಮ್ಯಾ ಕೂಡ ದರ್ಶನ್ ಜೊತೆಗೆ ನಟಿಸಿ ಹಲವು ಹಿಟ್‌ ಸಿನೆಮಾಗಳನ್ನು ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!