
ಆಗ್ರಾ[ಮಾ.06]: ಪ್ರೇಮ ಸೌಧ ತಾಜ್ ಮಹಲ್ ಇರುವ ಆಗ್ರಾದಲ್ಲಿ, ಅಣ್ಣನೊಬ್ಬನ ಮೇಲೆ ತಂಗಿಯನ್ನು ರೇಪ್ ಮಾಡಲು ಯತ್ನಿಸಿದ ಆರೋಪ ಕೇಳಿ ಬಂದಿದೆ. ಅತ್ಯಾಚಾರಗೈಯ್ಯಲು ವಿಫಲವಾದಾಗ ಆಕೆಯ ಕತ್ತು ಕೊಯ್ದು ಕೊಲೆಗೈದಿದ್ದಲ್ಲದೇ, ತಾನೂ ಆತ್ಮಹತ್ಯಗೆ ಶರಣಾಗಿದ್ದಾನೆ.
ಮದುವೆ ಆಗ್ತೀನಿ ಅಂತ ಅಪ್ರಾಪ್ತೆ ಮೇಲೆ ಅತ್ಯಾಚಾರ : ಅರೆಸ್ಟ್
ಹೌದು ಇಲ್ಲಿನ ತಾಜ್ ಗಂಜ್ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಇಲ್ಲೊಬ್ಬ ಯುವಕ ತನಗೆ ಅಣ್ಣನ ಸ್ಥಾನಮಾನ ನೀಡಿದ್ದ ತಂಗಿಯನ್ನೇ ರೇಪ್ ಮಾಡಲು ಮುಂದಾಗಿದ್ದಾನೆ. ಇದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದಾಗ ಕೋಪಗೊಂಡ ಆತ ಆಕೆಯ ಕತ್ತು ಕೊಯ್ದಿದ್ದಾನೆ. ಯುವತಿಯ ಚೀರಾಟ ಆಲಿಸಿ ಸ್ಥಳೀಯರು ಸ್ಥಳಕ್ಕಾಗಮಿಸುತ್ತಿದ್ದಂತೆಯೇ ಭಯ ಬಿದ್ದ ಆತ ಕೂಡಲೇ ಕೈಯ್ಯಲ್ಲಿದ್ದ ಚಾಕುವಿನಿಂದ ತನ್ನ ಕತ್ತನ್ನೂ ಕೊಯ್ದುಕೊಂಡಿದ್ದಾನೆ.
ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಇಲ್ಲಿನ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಈ ಕುರಿತು ಇನ್ನಷ್ಟೇ ತನಿಖೆ ಆರಂಭವಾಗಬೇಕಿದೆ.
ನಿರ್ಭಯಾ ದೋಷಿಗಳ ಆಟ ಅಂತ್ಯ, ಗಲ್ಲಿನಿಂದ ತಪ್ಪಿಸ್ಕೊಳ್ಳೋದು ಅಸಾಧ್ಯ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ