
ಕೋಲಾರ(ಸೆ.22): ಅಗ್ರಿಗೋಲ್ಡ್ ಕಂಪನಿಯ ಏಜೆಂಟ್ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಹೊಲ್ಲಂಬಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಕೋಲಾರ ತಾಲೂಕಿನ ಹೊಲ್ಲಂಬಳ್ಳಿಯ ಡಿ.ಎಂ. ಶ್ರೀನಿವಾಸಪ್ಪ (53) ಅವರು ಆತ್ಮಹತ್ಯೆ ಮಾಡಿಕೊಂಡವರು.
2004ರವರೆಗೂ ಅಗ್ರಿಗೋಲ್ಡ್ನಲ್ಲಿ ಏಜೆಂಟ್ ಆಗಿದ್ದ ಅವರು ಸಂಸ್ಥೆಗೆ 2 ಕೋಟಿ ಸಂಗ್ರಹಿಸಿ ಕೊಟ್ಟಿದ್ದರು. ಅಗ್ರಿಗೋಲ್ಡ್ ಕಂಪನಿಯ ವಂಚನೆ ಬಯಲಾದ ಬಳಿಕ ಸಂಸ್ಥೆಗೆ ಪಾವತಿಸಿದ ಹಣ ವಾಪಸ್ ಕೊಡಿಸುವಂತೆ ಗ್ರಾಹಕರು ಪೀಡಿಸುತ್ತಿದ್ದರು.
ರಾಜ್ಯದಲ್ಲಿ ಮತ್ತೊಂದು ದುರ್ಘಟನೆ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಕೇಸ್ ನ್ಯಾಯಾಲಯದಲ್ಲಿದೆ ಎಂದರೂ ಜನ ಕೇಳುತ್ತಿರಲಿಲ್ಲ. ಇದರಿಂದ ಶ್ರೀನಿವಾಸಪ್ಪ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ