ಎಐ ಎಫೆಕ್ಟ್‌: ಅಮೆರಿಕದಲ್ಲಿ ಕೆಲಸ ಕಳೆದುಕೊಂಡವ ಬೆಂಗ್ಳೂರಲ್ಲಿ ನೇಣಿಗೆ ಶರಣು, ಆಘಾತದಿಂದ ಪತ್ನಿಯೂ ದಾರುಣ ಅಂತ್ಯ

Kannadaprabha News   | Kannada Prabha
Published : Apr 01, 2026, 04:27 AM IST
AI Effect Techie Loses Job in US Dies in Bengaluru Heartbroken Wife Also Passes Away

ಸಾರಾಂಶ

ಕೃತಕ ಬುದ್ಧಿಮತ್ತೆ (ಎಐ) ಕಾರಣಕ್ಕೆ ವಿದೇಶದಲ್ಲಿ ಉದ್ಯೋಗ ಕಳೆದುಕೊಂಡು ಖಿನ್ನತೆಯಲ್ಲಿದ್ದ ಪತಿ ನೇಣು ಬಿಗಿದು ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. ಈ ಆಘಾತದಿಂದ ಪತ್ನಿ ಕೂಡ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

 ಬೆಂಗಳೂರು (ಏ.1): ವಿದೇಶದಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಕಾರಣಕ್ಕಾಗಿ ಉದ್ಯೋಗ ಕಳೆದುಕೊಂಡಿದ್ದ ಪತಿ ನೇಣಿ ಬಿಗಿದು ಆತ್ಮ೧ಹತ್ಯೆ ಮಾಡಿಕೊಂಡರೆ, ಪತಿಯ ಅಗಲಿಕೆಯ ನೋವಿನಿಂದ ಪತ್ನಿ ಕೂಡ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ.

ನಗರದ ಥಣಿಸಂದ್ರದ ಭಾರತಿ ಸಿಟಿ ಆವರಣದ ನಿಕ್ಕೋ ಹೋಮ್ಸ್ ಅಪಾರ್ಟ್‌ಮೆಂಟ್‌ ನಿವಾಸಿಗಳಾದ ಭಾನುಚಂದ್ರ ರೆಡ್ಡಿ (32), ಪತ್ನಿ ಬೀಬಿ ಶಾಜಿಯಾ ಸಿರಾಜ್‌ (31) ಮೃತರು.

ತೆಲಂಗಾಣ ಮೂಲದ ಭಾನುರೆಡ್ಡಿಗೆ ಮೂರು ವರ್ಷಗಳ ಹಿಂದೆ ಅಮೆರಿಕದಲ್ಲಿ ವಾರ್ಷಿಕ ₹1 ಕೋಟಿ ಪ್ಯಾಕೇಜ್‌ ಇರುವ ಉದ್ಯೋಗ ಸಿಕ್ಕಿತ್ತು. ಆದರೆ, ಇತ್ತೀಚೆಗೆ ಎಐನಿಂದಾಗಿ ಕೆಲಸ ಕಳೆದುಕೊಂಡಿದ್ದ ರೆಡ್ಡಿ ಖನ್ನತೆಗೊಳಗಾಗಿದ್ದರು. ಆ ಬಳಿಕ ಪತ್ನಿ ಜೊತೆ ಭಾರತಕ್ಕೆ ವಾಪಸಾಗಿ ಬೆಂಗಳೂರಲ್ಲಿ ನೆಲೆಸಿದ್ದರು.

 ಖಿನ್ನತೆಗೆ ತುತ್ತಾಗಿದ್ದ ರೆಡ್ಡಿಗೆ ಅನೇಕ ಆರೋಗ್ಯ ಸಮಸ್ಯೆ ಎದುರಾಗಿತ್ತು. ತನ್ನಿಂದ ಪತ್ನಿಗೆ ತೊಂದರೆಯಾಗುತ್ತಿದೆ ಎಂದು ಭಾವಿಸಿ ಆತ್ಮ೧ಹತ್ಯೆಗೂ ಯತ್ನಿಸಿದ್ದರು. ಆಗ ಪತ್ನಿಯೇ ಧೈರ್ಯ ತುಂಬಿದ್ದರು. ವಾರದ ಹಿಂದೆ ಶಾಜಿಯಾ ತವರಿಗೆ ತೆರಳಿದ್ದು ಮನೆಯಲ್ಲಿ ಏಕಾಂಗಿಯಾಗಿದ್ದ ರೆಡ್ಡಿ, ಫ್ಲ್ಯಾಟ್‌ನಲ್ಲೇ ನೇಣಿಗೆ ಶರಣಾಗಿದ್ದಾರೆ. ಸೋಮವಾರ ರಾತ್ರಿ ಪತ್ನಿ ಬೆಂಗಳೂರಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದರಿಂದ ನೊಂದ ಆಕೆ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಆತ್ಮ೧ಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
ಮೈಸೂರಿನಲ್ಲಿ ಮಂಗಳಮುಖಿಯರ ಮೇಲೆ ಕ್ರೂರ ಹಲ್ಲೆ: ಮೂವರು ಆರೋಪಿಗಳು ವಶಕ್ಕೆ