
ಶಿವಮೊಗ್ಗ (ಜ.11): ತುಂಬು ಜೀವನ ನಡೆಸಿದ ವೃದ್ಧ ದಂಪತಿಗಳು ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಾವಂತೂರು ಗ್ರಾಮದಲ್ಲಿ ನಡೆದಿದೆ.
ಹೊಳೆಯಪ್ಪ (90) ಹಾಗೂ ಗಂಗಮ್ಮ(80) ಸಾವಿನಲ್ಲೂ ಒಂದಾದ ವೃದ್ಧ ದಂಪತಿಗಳು. ಕೃಷಿ ಕಾರ್ಮಿಕರಾಗಿ ಜೀವನ ನಡೆಸುತ್ತಿದ್ದ ದಂಪತಿ. 90ರ ಹರೆಯದ ಹೊಳೆಯಪ್ಪ ಹಾಗೂ 84ರ ಗಂಗಮ್ಮ ಬಡತನದಲ್ಲಿದ್ದರೂ ಕೂಲಿನಾಲಿ ಮಾಡಿಕೊಂಡು ಮದುವೆಯಾದಾಗಿಂದಲೂ ಪರಸ್ಪರ ಬಿಟ್ಟಿರಲಾರದಷ್ಟು ಪ್ರೀತಿಯಿಂದ ತುಂಬು ಸಂಸಾರ ನಡೆಸಿದ್ದ ವೃದ್ಧ ದಂಪತಿಗಳು. ಆದರೆ ಇತ್ತೀಚೆಗೆ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ಹೊಳೆಯಪ್ಪ. ಇಂದು ಬೆಳಗಿನ ಜಾವ 1 ಗಂಟೆ ಸಮಯಕ್ಕೆ ಮೃತಪಟ್ಟಿರುವ ಪತಿ. ಪತಿಯ ಸಾವಿನ ಸುದ್ದಿ ತಿಳಿದು ತೀವ್ರ ಹೃದಯಾಘಾತಕ್ಕೆ ಒಳಗಾಗಿ ಒಂದು ಗಂಟೆಯೊಳಗೆ ಪತ್ನಿ ಗಂಗಮ್ಮ ಸಹ ಮೃತಳಾಗಿದ್ದಾಳೆ.
ಮನೆಯಿಂದ ಹೊರಹೋಗುವಂತೆ ಪತ್ನಿ ಜೊತೆ ಜಗಳ; ಲೆದರ್ ಬೆಲ್ಟ್ನಿಂದ ಹಲ್ಲೆ ನಡೆಸಿದ ದುರುಳ
ಮೃತ ವೃದ್ಧ ದಂಪತಿಗಳ ನಿಧನಕ್ಕೆ ಮುಂಬಾರು ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ. ಇಬ್ಬರು ಗಂಡು ಮಕ್ಕಳು, ಐವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗ ಅಗಲಿರುವ ದಂಪತಿಗಳು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ