
ಕೊಪ್ಪಳ (ನ. 24): ಕೊಪ್ಪಳ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ದೇವರಿಗೆ ಬಿಟ್ಟಿದ್ದ ಗೋವೊಂದರ ಕಾಲನ್ನು ಪಾಪಿಗಳು ಕೊಡಲಿಯಿಂದ ಕಡಿದು ವಿಕೃತಿ ಮೆರೆದಿದ್ದಾರೆ. ಈ ಘಟನೆ ಯಲಬುರ್ಗಾ ತಾಲೂಕಿನ ಮಾಟರಂಗಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಗೋವನ್ನು ಮಾಟರಂಗಿ ಗ್ರಾಮದ ಮಾರುತೇಶ್ವರ ದೇವರಿಗೆ ಹತ್ತು ವರ್ಷಗಳ ಹಿಂದೆ ಬಿಡಲಾಗಿತ್ತು. ಗ್ರಾಮಸ್ಥರೆಲ್ಲರೂ ಇದನ್ನು ದೈವದ ರೂಪದಲ್ಲಿ ನಿತ್ಯ ಪೂಜಿಸುತ್ತಿದ್ದರು. ಆದರೆ ನಿನ್ನೆ (ನವೆಂಬರ್ 23) ಈ ಗೋವು ಮಾಟರಂಗಿ ಗ್ರಾಮದ ಪಕ್ಕದಲ್ಲಿರುವ ಲಿಂಗನಬಂಡಿ ರಮೇಶ್ ಎನ್ನುವವರ ಜಮೀನಿನಲ್ಲಿ ಮೇಯಲು ಹೋಗಿತ್ತು. ಈ ಸಂದರ್ಭದಲ್ಲಿ ಕೊಡಲಿಯಿಂದ ಗೋವಿನ ಕಾಲನ್ನು ಕಡಿಯಲಾಗಿದೆ.
ದೇವರಿಗೆ ಬಿಟ್ಟ ಗೋವಿನ ಕಾಲನ್ನು ಕಡಿದಿರುವ ಆರೋಪವನ್ನು ಜಮೀನಿನ ಮಾಲೀಕರಾದ ಲಿಂಗನಬಂಡಿ ರಮೇಶ್ ಅವರ ಮೇಲೆ ಗ್ರಾಮಸ್ಥರು ಹೊರಿಸಿದ್ದಾರೆ.
ದೇವರಿಗೆ ಬಿಟ್ಟ ಗೋವಿಗೆ ಈ ರೀತಿ ಕ್ರೂರವಾಗಿ ಹಿಂಸೆ ನೀಡಿರುವ ಘಟನೆಯನ್ನು ಗ್ರಾಮಸ್ಥರು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ