ಕೊಪ್ಪಳ: ದೇವರಿಗೆ ಬಿಟ್ಟ ಗೋವಿನ ಕಾಲು ಕಡಿದ ಪಾಪಿಗಳು!

Published : Nov 24, 2025, 12:28 PM IST
Koppal Crime news

ಸಾರಾಂಶ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾಟರಂಗಿ ಗ್ರಾಮದಲ್ಲಿ, ದೇವರಿಗೆ ಬಿಟ್ಟಿದ್ದ ಗೋವೊಂದರ ಕಾಲನ್ನು ಕೊಡಲಿಯಿಂದ ಕಡಿದು ಅಮಾನವೀಯವಾಗಿ ಹಿಂಸಿಸಲಾಗಿದೆ. ಗ್ರಾಮಸ್ಥರು ದೈವದ ರೂಪವೆಂದು ಪೂಜಿಸುತ್ತಿದ್ದ ಈ ಗೋವಿಗೆ ಹಿಂಸೆ ನೀಡಿದ ಜಮೀನಿನ ಮಾಲೀಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕೊಪ್ಪಳ (ನ. 24): ​ಕೊಪ್ಪಳ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ದೇವರಿಗೆ ಬಿಟ್ಟಿದ್ದ ಗೋವೊಂದರ ಕಾಲನ್ನು ಪಾಪಿಗಳು ಕೊಡಲಿಯಿಂದ ಕಡಿದು ವಿಕೃತಿ ಮೆರೆದಿದ್ದಾರೆ. ಈ ಘಟನೆ ಯಲಬುರ್ಗಾ ತಾಲೂಕಿನ ಮಾಟರಂಗಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೈವದ ರೂಪವೆಂದು ಪೂಜಿಸುತ್ತಿದ್ದ ಗ್ರಾಮಸ್ಥರು:

ಈ ಗೋವನ್ನು ಮಾಟರಂಗಿ ಗ್ರಾಮದ ಮಾರುತೇಶ್ವರ ದೇವರಿಗೆ ಹತ್ತು ವರ್ಷಗಳ ಹಿಂದೆ ಬಿಡಲಾಗಿತ್ತು. ಗ್ರಾಮಸ್ಥರೆಲ್ಲರೂ ಇದನ್ನು ದೈವದ ರೂಪದಲ್ಲಿ ನಿತ್ಯ ಪೂಜಿಸುತ್ತಿದ್ದರು. ಆದರೆ ನಿನ್ನೆ (ನವೆಂಬರ್ 23) ಈ ಗೋವು ಮಾಟರಂಗಿ ಗ್ರಾಮದ ಪಕ್ಕದಲ್ಲಿರುವ ಲಿಂಗನಬಂಡಿ ರಮೇಶ್ ಎನ್ನುವವರ ಜಮೀನಿನಲ್ಲಿ ಮೇಯಲು ಹೋಗಿತ್ತು. ಈ ಸಂದರ್ಭದಲ್ಲಿ ಕೊಡಲಿಯಿಂದ ಗೋವಿನ ಕಾಲನ್ನು ಕಡಿಯಲಾಗಿದೆ.

ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ:

ದೇವರಿಗೆ ಬಿಟ್ಟ ಗೋವಿನ ಕಾಲನ್ನು ಕಡಿದಿರುವ ಆರೋಪವನ್ನು ಜಮೀನಿನ ಮಾಲೀಕರಾದ ಲಿಂಗನಬಂಡಿ ರಮೇಶ್ ಅವರ ಮೇಲೆ ಗ್ರಾಮಸ್ಥರು ಹೊರಿಸಿದ್ದಾರೆ.

​ದೇವರಿಗೆ ಬಿಟ್ಟ ಗೋವಿಗೆ ಈ ರೀತಿ ಕ್ರೂರವಾಗಿ ಹಿಂಸೆ ನೀಡಿರುವ ಘಟನೆಯನ್ನು ಗ್ರಾಮಸ್ಥರು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!