ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ; ಬಾಲಕಿ ಕೆನ್ನೆಗೆ ಅನ್ನದ ಚಮಚದಿಂದ ಬರೆ ಹಾಕಿದ ಸಹಾಯಕಿ!

Published : Feb 05, 2025, 10:55 PM IST
ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ; ಬಾಲಕಿ ಕೆನ್ನೆಗೆ ಅನ್ನದ ಚಮಚದಿಂದ ಬರೆ ಹಾಕಿದ ಸಹಾಯಕಿ!

ಸಾರಾಂಶ

ಬಾಗಲಕೋಟೆ ಜಿಲ್ಲೆಯ ಗುಲಗಾಲಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ಬಾಲಕಿಯೊಬ್ಬಳ ಮೇಲೆ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಅನ್ನದ ಚಮಚದಿಂದ ಬಾಲಕಿಯ ಕೆನ್ನೆಗೆ ಬರೆ ಎಳೆದಿದ್ದು, ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಬಾಗಲಕೋಟೆ (ಫೆ.5): ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿ ಮಕ್ಕಳ ಮೇಲೆ ಸಿಬ್ಬಂದಿಯಿಂದ ಹಲ್ಲೆ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ. ಒಂದೆಡೆ ಕಳಪೆ ಆಹಾರದಿಂದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿದ್ದರೆ, ಇನ್ನೊಂದೆಡೆ ಅಡುಗೆ ಸಿಬ್ಬಂದಿಯಿಂದ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವುದು ಪೋಷಕರು ಆತಂಕಪಡುವಂತಾಗಿದೆ. ಇದೀಗ ಅಂಥದ್ದೇ ಪ್ರಕರಣ ಬಾಗಲಕೋಟೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಬಾಗಲಕೋಟೆ ಜಿಲ್ಲೆಯ ಗುಲಗಾಲಜಂಬಗಿ ಗ್ರಾಮದಲ್ಲಿನ ವಾರ್ಡ್ ಸಂಖ್ಯೆ 2ರ ಆರೋಗ್ಯ ಕೇಂದ್ರದ ಅಂಗನವಾಡಿ ಸಹಾಯಕಿ ಪುಟ್ಟ ಬಾಲಕಿಯ ಕೆನ್ನೆಮೇಲೆ ಅನ್ನದ ಚಮಚದಿಂದ ಅಮಾನುಷವಾಗಿ ಬರೆ ಎಳೆದ ಘಟನೆ ನಡೆದಿದೆ.

ಪ್ರೀತಿ, ಗಾಯಗೊಂಡಿರುವ ಬಾಲಕಿ. ಲೋಕಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶೋಭಾ ಹೊಳೆಪ್ಪನವರ, ಸಹಾಯಕಿ ಶಾರವ್ವ ಪಂಚಗಾವಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಂಡ್ಯದಲ್ಲಿ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ತಾತ್ಕಾಲಿಕ ಅಮಾನತು:

ಬಾಲಕಿ ಎಂದಿನಂತೆ ಅಂಗನಾಡಿಗೆ ಬಂದಿದ್ದಾಳೆ. ಆದರೆ ಇಂದು ಕ್ಷುಲ್ಲಕ ಕಾರಣಕ್ಕೆ ಬಾಲಕಿಯೊಂದಿಗೆ ಅಮಾನವೀಯವಾಗಿ ವರ್ತಿಸಿ. ಅನ್ನದ ಚಮಚದಿಂದ ಬರೆ ಎಳೆದು ವಿಕೃತಿ ಮೆರೆದಿರುವ ಸಹಾಯಕಿ. ಘಟನೆ ಮಾಹಿತಿ ತಿಳಿದು ಸಿಡಿಪಿಒ ಕಾಶಿಬಾಯಿ ಕೋರೆಗೋಳ ಅವರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶೋಭಾ ಹೊಳೆಪ್ಪನವರ, ಸಹಾಯಕಿ ಶಾರವ್ವ ಪಂಚಗಾವಿ ಇಬ್ಬರನ್ನೂ ತಾತ್ಕಾಲಿಕವಾಗಿ ಅಮಾನತುಗೊಳಿಸಿ, ಬೇರೆಯವರು ಕೆಲಸಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಿದ್ದಾರೆ.

ಗ್ರಾಮಸ್ಥರಿಂದ ದೂರು ಬಂದ ಹಿನ್ನೆಲೆ ತಕ್ಷಣವೇ ಸ್ಥಳಕ್ಕೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಬಾಲಕಿಗೆ ಬರೆ ಹಾಕಿರುವುದನ್ನು ಖಚಿತಪಡಿಸಿದರು. ಬಳಿಕ ಗಾಯಾಳು ಬಾಲಕಿಯನ್ನ ಲೋಕಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?