ಸಾಕಿದ ಶ್ವಾನವನ್ನು 'ನಾಯಿ' ಎಂದಿದ್ದಕ್ಕೆ 62 ವರ್ಷದ ವ್ಯಕ್ತಿ ಕೊಲೆ..!

Published : Jan 21, 2023, 03:05 PM ISTUpdated : Jan 21, 2023, 03:17 PM IST
ಸಾಕಿದ ಶ್ವಾನವನ್ನು 'ನಾಯಿ' ಎಂದಿದ್ದಕ್ಕೆ 62 ವರ್ಷದ ವ್ಯಕ್ತಿ ಕೊಲೆ..!

ಸಾರಾಂಶ

ರಾಯಪ್ಪನ್‌ ಆ ಸಾಕುನಾಯಿಯನ್ನು ಹಗ್ಗದ ಸಹಾಯದಿಂದ ಕಟ್ಟಿಹಾಕಿ ಎಂದು ಕೇಳಿಕೊಂಡಿದ್ದರು. ಅಲ್ಲದೆ,  ಗುರುವಾರ ರಾಯಪ್ಪನ್ ಅವರು ತಮ್ಮ ಜಮೀನಿನಲ್ಲಿ ಚಾಲನೆಯಲ್ಲಿರುವ ನೀರಿನ ಪಂಪ್ ಅನ್ನು ಸ್ವಿಚ್ ಆಫ್ ಮಾಡಲು ಮೊಮ್ಮಗ ಕೆಲ್ವಿನ್ ಅವರನ್ನು ಕೇಳಿದ ಬಳಿಕ ಅವರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ದಿಂಡಿಗಲ್‌ (ಜನವರಿ 21, 2023) : ಸಾಕು ನಾಯಿಯನ್ನು ಅದರ ಹೆಸರಿನಿಂದ ಕರೆಯದೆ ನಾಯಿ ಎಂದು ಕರೆದಿದ್ದಕ್ಕೆ 62 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಲಾಗಿರುವ ಘಟನೆ ತಮಿಳುನಾಡಿನ ದಿಂಡಿಗಲ್‌ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ದಿಂಡಿಗಲ್‌ ಜಿಲ್ಲೆಯ ಥಡಿಕೊಂಬು ಪೊಲೀಸ್‌ ಠಾಣಾ ವ್ಯಾಪ್ತಿಯ ಉಲಗಂಪಟ್ಟಿಯಾರ್‌ಕೊಟ್ಟಂ ಗ್ರಾಮದಲ್ಲಿ ನಡೆದಿದೆ. ಸಾಕು ನಾಯಿಯ ಮಾಲೀಕರಾದ ನಿರ್ಮಲಾ ಫಾತಿಮಾ ರಾಣಿ ಹಾಗೂ ಅವರ ಮಕ್ಕಳಾದ ಡೇನಿಯೆಲ್ ಹಾಗೂ ವಿನ್ಸೆಂಟ್‌, ಈ ಹಿಂದೆಯೇ ತಮ್ಮ ಸಂಬಂಧಿಕರೂ ಆದ 62 ವರ್ಷದ ರಾಯಪ್ಪನ್‌ಗೆ ನಾಯಿ ಎಂದು ಕರೆಯಬೇಡಿ ಎಂದು ಹಲವು ಬಾರಿ ಎಚ್ಚರಿಕೆ ನೀಡಿದ್ದರು ಎಂದು ತಿಳಿದುಬಂದಿದೆ. 

ಇನ್ನೊಂದೆಡೆ, ರಾಯಪ್ಪನ್‌ ಆ ಸಾಕುನಾಯಿಯನ್ನು ಹಗ್ಗದ ಸಹಾಯದಿಂದ ಕಟ್ಟಿಹಾಕಿ ಎಂದು ಕೇಳಿಕೊಂಡಿದ್ದರು. ಅಲ್ಲದೆ,  ಗುರುವಾರ ರಾಯಪ್ಪನ್ ಅವರು ತಮ್ಮ ಜಮೀನಿನಲ್ಲಿ ಚಾಲನೆಯಲ್ಲಿರುವ ನೀರಿನ ಪಂಪ್ ಅನ್ನು ಸ್ವಿಚ್ ಆಫ್ ಮಾಡಲು ಮೊಮ್ಮಗ ಕೆಲ್ವಿನ್ ಅವರನ್ನು ಕೇಳಿದ ಬಳಿಕ ಅವರನ್ನು ಹತ್ಯೆ ಮಾಡಲಾಗಿದೆ ಎಂದೂ ತಿಳಿದುಬಂದಿದೆ. ನಾಯಿ ಸುತ್ತಲಿರುವ ಕಾರಣ ಕೋಲು ಒಯ್ಯುವಂತೆ ಕೆಲ್ವಿನ್‌ಗೆ ರಾಯಪ್ಪನ್‌ ಅವರು ಹೇಳಿದ್ದರು.

ಇದನ್ನು ಓದಿ: ನಾಯಿ ಕಡಿತಕ್ಕೆ ನೀಡುವ ಇಂಜೆಕ್ಷನ್‌ ವೆಚ್ಚ ಭರಸಿ :ಡಿಸಿ ಸೂಚನೆ

ಇದನ್ನು ಕೇಳಿದ ಡೇನಿಯಲ್ ಕೋಪಗೊಂಡು ರಾಯಪ್ಪನ್‌ ಅವರ ಜತೆಗೆ ಜಗಳವಾಡಿದ್ದಾರೆ. ಈ ವೇಳೆ ಅವರ ಎದೆಗೆ ಪಂಚ್‌ ಮಾಡಿದ್ದಾರೆ. ನಂತರ, ರಾಯಪ್ಪನ್‌ ಅವರು ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಬಳಿಕ, ಡೇನಿಯಲ್ ಮತ್ತು ಕುಟುಂಬದವರು ಅರೆಸ್ಟ್‌ ಆಗುವ ಭೀತಿಯಿಂದ ಸ್ಥಳದಿಂದ ಓಡಿಹೋದರು ಎಂದು ತಿಳಿದುಬಂದಿದೆ. ಆದರೆ, ಈ ಘಟನೆ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು, ಶುಕ್ರವಾರ ನಿರ್ಮಲಾ ಮತ್ತು ಅವರ ಪುತ್ರರನ್ನು ಬಂಧಿಸಿದ್ದಾರೆ. ಅಲ್ಲದೆ, ಐಪಿಸಿಯ ಹಲವು ಕಾಯ್ದೆಗಳಡಿ ಪೊಲೀಸರು ಆರೋಪಿಗಳ ವಿರುದ್ಧ ಕೇಸ್‌ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. 

ಬೀದಿ ಬದಿ ನಾಯಿಗೆ ಆಹಾರ ತಿನ್ನಿಸುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದಿದ್ದ ಕಾರು..!
ಕೆಲ ದಿನಗಳ ಹಿಮದೆ, ಬೀದಿ ಬದಿ ನಾಯಿಗೆ ಆಹಾರ ತಿನ್ನಿಸುತ್ತಿದ್ದ ಯುವತಿಗೆ ಕಾರೊಂದು ಡಿಕ್ಕಿ ಹೊಡೆದು ಯುವತಿ ಗಂಭೀರ ಗಾಯಗೊಂಡ ಘಟನೆ ಚಂಡೀಗಢದಲ್ಲಿ ನಡೆದಿತ್ತು. ಹಾಗೂ, ಈ ಅವಘಡದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿತ್ತು. ಇದೊಂದು ಹಿಟ್ & ರನ್ ಪ್ರಕರಣವಾಗಿದ್ದು, ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ಬೀದಿನಾಯಿಗೆ ಆಹಾರ ತಿನ್ನಿಸುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಈ ಅಪಘಾತದಲ್ಲಿ ಗಾಯಗೊಂಡ ಯುವತಿಯನ್ನು ತೇಜಸ್ವಿತ ಎಂದು ಗುರುತಿಸಲಾಗಿದ್ದು, ಕಾರು ಡಿಕ್ಕಿ ಹೊಡೆದಿದ್ದರಿಂದ ಗಂಭೀರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಇದನ್ನೂ ಓದಿ: ನಾಯಿಗೆ ಆಹಾರ ನೀಡುತ್ತಿದ್ದ ಯುವತಿಯನ್ನು ಗುದ್ದಿಕೊಂಡು ಹೋದ ಕಾರು: ವಿಡಿಯೋ

ಈಕೆ ಮನೆ ಮುಂದೆ ಬೀದಿ ನಾಯಿಗೆ ಆಹಾರ ನೀಡುತ್ತಿದ್ದಾಗ ಈ ಘಟನೆ ನಡೆದಿದೆ.  ಘಟನೆಯಿಂದ ಯವತಿಯ ತಲೆಗೆ ಗಂಭೀರ ಗಾಯವಾಗಿದ್ದು,  ಆಕೆಯ ತಲೆಯ ಎರಡು ಭಾಗಕ್ಕೂ ಸ್ಟಿಚ್ ಹಾಕಲಾಗಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ಆಕೆ ನಮ್ಮೊಂದಿಗೆ ಮಾತನಾಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ತಿಳಿಸಿದ್ದರು. ಕುಟುಂಬದವರ ಪ್ರಕಾರ,  ಶನಿವಾರ ರಾತ್ರಿ ಈ ಘಟನೆ ನಡೆದಿದೆ.  

ಇದನ್ನೂ ಓದಿ: ಆಹಾರ ಪೂರೈಕೆಗೆ ಹೋದಾಗ ಮೈ ಮೇಲೆ ಹಾರಿದ ನಾಯಿ: ಕಟ್ಟಡದಿಂದ ಹಾರಿದ ಸ್ವಿಗ್ಗಿ ಬಾಯ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ