
ಬೆಂಗಳೂರು (ಜೂ.23): ಅನುಮಾನಾಸ್ಪದ ರೀತಿಯಲ್ಲಿ ವಿವಾಹಿತೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ನಗರದ ಅಂಜನಾನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ತನುಜಾ ಎಂದು ಗುರುತಿಸಲಾಗಿದೆ. ಮಾಗಡಿ ಮುಖ್ಯರಸ್ತೆಯ ಅಂಜನಾನಗರ ಸಮೀಪದ ನಿವಾಸದಲ್ಲಿ ಇಂದು ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದೆ.
ಮೇಲ್ನೋಟಕ್ಕೆ ತನುಜಾ ಅವರು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮ*ಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ತನುಜಾ ಅವರು ನಾಲ್ಕು ವರ್ಷಗಳ ಹಿಂದೆ ನವೀನ್ ಎಂಬಾತನನ್ನು ವಿವಾಹವಾಗಿದ್ದರು. ದಂಪತಿಗೆ ಎರಡೂವರೆ ವರ್ಷದ ಹೆಣ್ಣು ಮಗು ಇದ್ದು, ತನುಜಾ ಅವರು ಸದ್ಯ ಮೂರು ತಿಂಗಳ ಗರ್ಭಿಣಿಯಾಗಿದ್ದರು ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಹಿಂದೆ ಯಾವುದೇ ಅನುಮಾನಾಸ್ಪದ ಕಾರಣಗಳಿವೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ