
ವಿಜಯಪುರ (ಅ.4): ವಿಜಯಪುರ ಜಿಲ್ಲೆಯ ಅಂಕಲಗಿ ಗ್ರಾಮದ ದುರ್ಗಾದೇವಿ ಜಾತ್ರೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆಯಾಗಿದ್ದು, ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣ ಸಂಭವಿಸಿದೆ.
ಈ ಘಟನೆಗೆ ಸಂಬಂಧಿಸಿದಂತೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಒಟ್ಟು 14 ಜನರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರದ ಸೀರೋಡಾ ಸಮುದ್ರದಲ್ಲಿ ಘನಘೋರ ದುರಂತ: ಬೆಳಗಾವಿಯ ಒಂದೇ ಕುಟುಂಬದ ಮೂವರು ಜಲಸಮಾಧಿ, ನಾಲ್ವರು ಕಣ್ಮರೆ!
ಗಲಾಟೆ ನಡೆದಿದ್ದು ಹೇಗೆ?
ಜಾತ್ರೆಯ ವೇಳೆ ವಡ್ಡರ್ ಮತ್ತು ಪೂಜಾರಿ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ರಾಮ ಅಂಕಲಗಿ ಎಂಬಾತ ತನ್ನ ಲೈಸೆನ್ಸ್ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ಗುಂಡು ದುರದೃಷ್ಟವಶಾತ್ ಒಬ್ಬ ಬಾಲಕಿಯ ಕಾಲಿಗೆ ಗುಂಡು ತಗುಲಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸರು, ಎರಡೂ ಗುಂಪುಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಗಲಾಟೆಯಲ್ಲಿ ಭಾಗಿಯಾದ ಒಟ್ಟು 14 ಜನರನ್ನು ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿ, ತನಿಖೆಯನ್ನು ಆರಂಭಿಸಿದ್ದಾರೆ.
ಘಟನೆಯಿಂದ ಜಾತ್ರೆಯ ವಾತಾವರಣ ಹಾಳಾಗಿ ಕೆಲಕಾಲ ಆತಂಕ ಸೃಷ್ಟಿಸಿತು, ಪೊಲೀಸರು ಸ್ಥಳದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಘಟನೆಯ ಹಿನ್ನೆಲೆ ಮತ್ತು ಗುಂಡು ಹಾರಾಟಕ್ಕೆ ನಿಖರ ಕಾರಣಗಳ ಬಗ್ಗೆ ಪೊಲೀಸರು ತೀವ್ರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ