ಅನ್ನಭಾಗ್ಯ ಅಕ್ಕಿ, ಖಾಸಗಿಯವರ ಪಾಲು?: ಭಟ್ಕಳದಲ್ಲಿ ಓಮ್ನಿ ಕಾರಿನಲ್ಲಿ ಸಾಗಿಸುತ್ತಿದ್ದ ಟನ್ ಗಟ್ಟಲೆ ಅಕ್ಕಿ, ಕಿಂಗ್ ಪಿನ್ ಯಾರು?

Published : Jan 18, 2026, 07:40 PM IST
Anna Bhagya Rice Scam in Bhatkal Tons of Rice Seized From Omni Who is Kingpin

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬಡವರ ಪಾಲಿನ 'ಅನ್ನಭಾಗ್ಯ' ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, 1,150 ಕೆ.ಜಿ. ಪಡಿತರ ಅಕ್ಕಿ ಹಾಗೂ ವಾಹನವನ್ನು ವಶಪಡಿಸಿಕೊಂಡು ಮೂವರ ವಿರುದ್ಧ ಪ್ರಕರಣ .

ಉತ್ತರ ಕನ್ನಡ(ಜ.18): ಉಕ ಜಿಲ್ಲೆಯ ಭಟ್ಕಳದಲ್ಲಿ ಬಡವರ ಪಾಲಿನ 'ಅನ್ನಭಾಗ್ಯ' ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ದೊಡ್ಡ ಜಾಲವನ್ನು ಆಹಾರ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಬರೋಬ್ಬರಿ 1,150 ಕೆ.ಜಿ. ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಂಕ್ರಾಂತಿ ಹಬ್ಬದ ಬೆನ್ನಲ್ಲೇ ಈ ಅಕ್ರಮ ಬೆಳಕಿಗೆ ಬಂದಿರುವುದು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

ಹೈವೇ ಮೇಲೆ ಫಿಲ್ಮಿ ಸ್ಟೈಲ್ ದಾಳಿ!

ಆಹಾರ ನಿರೀಕ್ಷಕ ಉದಯ ದ್ಯಾಮಪ್ಪ ತಳವಾರ ನೇತೃತ್ವದ ತಂಡ ಭಟ್ಕಳದ ರಂಗಿನಕಟ್ಟಾ ಬಳಿಯ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಖದೀಮರಿಗಾಗಿ ಕಾದು ಕುಳಿತಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಮಾರುತಿ ಓಮ್ನಿ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ, ಅಕ್ರಮವಾಗಿ ತುಂಬಿದ್ದ ಅಕ್ಕಿ ಮೂಟೆಗಳು ಪತ್ತೆಯಾಗಿವೆ. ಮುಗ್ಧಂ ಕಾಲೋನಿ ನಿವಾಸಿ ಆಸೀಫ್ ಉಲ್ಲಾ (38) ಎಂಬಾತ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ಮೂವರು ಆರೋಪಿಗಳ ವಿರುದ್ಧ ಕೇಸ್ ದಾಖಲು

ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿ ಆಸೀಫ್ ಉಲ್ಲಾ, ಈ ಅಕ್ಕಿಯನ್ನು ಪುರವರ್ಗದ ಮೊಹಮ್ಮದ ಸಮೀರ್ ಹಾಗೂ ಹನುಮಾನ್ ನಗರದ ರಾಮಚಂದ್ರ ನಾಯ್ಕ ಎಂಬುವವರಿಗೆ ತಲುಪಿಸಲು ಹೊರಟಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಧಿಕಾರಿಗಳು ಸುಮಾರು 39,100 ರೂ. ಮೌಲ್ಯದ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಿದ್ದಾರೆ. ಆಹಾರ ನಿರೀಕ್ಷಕರು ನೀಡಿದ ದೂರಿನ ಮೇರೆಗೆ ಭಟ್ಕಳ ನಗರ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೀದರ್: ಸಂಕ್ರಾಂತಿ ಸಂಭ್ರಮದ ನಡುವೆ ಘೋರ ದುರಂತ; ಗಾಳಿಪಟ ಹಾರಿಸಲು ಹೋಗಿದ್ದ ಯುವಕ ಸಾವು!
ಹೆಂಡತಿಯನ್ನೇ 'ಅಕ್ಕ' ಎಂದು ಪರಿಚಯಿಸಿ ಮದುವೆ ನಾಟಕ: ಟೆಕ್ಕಿ ಯುವತಿಗೆ ₹1.75 ಕೋಟಿ ವಂಚಿಸಿದ ಕಿರಾತಕ ಕುಟುಂಬ!