
ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿತ್ತು. ಒಟ್ಟಾರೆ, ಈ ಕೇಸಿನಲ್ಲಿ ಈಗಾಗಲೇ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆದರಿಕೆ ಹಾಕಿದ ಪ್ರಕರಣದಲ್ಲಿ ವಿಜಯಪುರ ಮೂಲದ ಸಂತೋಷ್ ಎಂಬ ದರ್ಶನ್ ಅಭಿಮಾನಿಯನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಗಾರೆ ಕೆಲಸ ಮಾಡಿಕೊಂಡಿರುವ ಬಂಧಿತ ಆರೋಪಿ ಸಂತೋಷ್, 'ನಮ್ ಬಾಸ್ ತಂಟೆಗೆ ಬರಬೇಡ..' ಎಂದು ಕೆಟ್ಟ ಪದಗಳೊಂದಿಗೆ ರಮ್ಯಾ ಅವರಿಗೆ ಸಂದೇಶ ಕಳುಹಿಸಿದ್ದ ಆರೋಪಕ್ಕೆ ಒಳಗಾಗಿದ್ದಾನೆ. ಪ್ರಕರಣದ ಹಿನ್ನೆಲೆಯಲ್ಲಿ, ನಟಿ ರಮ್ಯಾ ಅವರು ಸೋಷಿಯಲ್ ಮೀಡಿಯಾದಲ್ಲಿ ತಮಗೆ ಬಂದ ಕಿರುಕುಳದ ಸಂದೇಶಗಳ ಬಗ್ಗೆ ದೂರು ದಾಖಲಿಸಿದ್ದರು. ಸಿಸಿಬಿ ಸೈಬರ್ ಕ್ರೈಂ ವಿಭಾಗವು ತಾಂತ್ರಿಕ ತನಿಖೆ ನಡೆಸಿ, ಐಪಿ ಅಡ್ರೆಸ್ ಮೂಲಕ ಆರೋಪಿಯನ್ನು ಪತ್ತೆಹಚ್ಚಿತು. ಸಂತೋಷ್ ಎಂಬುವವನು ದರ್ಶನ್ ಅವರ ಅಭಿಮಾನಿಯಾಗಿದ್ದು, ನಟಿಯ ವಿರುದ್ಧ ಆಕ್ರೋಶದಿಂದ ಸಂದೇಶ ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ