
ಚಿಕ್ಕೋಡಿ (ಜು.9): ಸಾಲಭಾದೆ ತಾಳಲಾರದೇ ವಿಷ ಸೇವಿಸಿ ರೈತನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.
ಈರಯ್ಯ ಅಪ್ಪಯ್ಯ ಹಿರೇಮಠ(30) ಮೃತ ದುರ್ದೈವಿ. ಸೋಮವಾರ ವಿಷ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದ ಈರಯ್ಯ. ಕೂಡಲೇ ಕುಟುಂಬದವರು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತರಾಗಿದ್ದಾರೆ.
ಧಾರವಾಡ: ಎರಡೇ ವರ್ಷದಲ್ಲಿ 101 ಅನ್ನದಾತರು ಆತ್ಮಹತ್ಯೆ!
ಮೃತ ಈರಯ್ಯ ಅವರ ತಂದೆ ಅಪ್ಪಯ್ಯ ಹೆಸರಿನಲ್ಲಿ ಒಂದೂವರೆ ಎಕರೆ ಜಮೀನು ಇದೆ. ಆದರೆ ಕಳೆದ ವರ್ಷ ತೀವ್ರ ಬರಗಾಲ, ಮಳೆ ಇಲ್ಲದೆ ಬೆಳೆ ಕೈಕೊಟ್ಟಿದ್ದು ತೀವ್ರ ಸಂಕಷ್ಟಕ್ಕೀಡಾಗಿದ್ದ ರೈತ ಈರಯ್ಯನ ಕುಟುಂಬ. ಕುಟುಂಬ ನಿರ್ವಹಣೆ, ಬೆಳೆಗೆ ಸ್ಥಳೀಯ ಪಿಕೆಪಿಎಸ್, ಖಾಸಗಿ ಬ್ಯಾಂಕ್ ಹಾಗೂ ಕೈಗಡ ಸಾಲ ಮಾಡಿಕೊಂಡಿದ್ದ ರೈತ. ಸುಮಾರು 4 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಸಾಲ ಮರುಪಾವತಿ ಮಾಡಲಾಗದೆ ಆತ್ಮಹತ್ಯೆಗೆ ಶರಣಾಗಿರುವ ರೈತ. ಆತ್ಮಹತ್ಯೆ ಘಟನೆ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ