
ಬೈಲಹೊಂಗಲ (ಜೂ.16): ಸಮೀಪದ ಸಂಪಗಾಂವ ಗ್ರಾಮದ ಹಳೇ ತಿಗಡಿ ರಸ್ತೆಯ ಹತ್ತಿರ ಯಾರೋ ಅಪರಿಚಿತರು ಚಕ್ಕಡಿಯ ಸಮೇತ ಎರಡು ಕಟಗಿಯ ದ್ಯಾಮವ್ವನ ಮೂರ್ತಿಗಳನ್ನು ಇಟ್ಟುಹೋಗಿರುವುದು ಗ್ರಾಮದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬೆಳಗ್ಗೆ ಗ್ರಾಮದ ಹತ್ತಿರ ಈ ರೀತಿ ಚಕ್ಕಡಿಯಲ್ಲಿ ದೇವತೆಗಳನ್ನು ಇಟ್ಟುಹೋಗಿರುವದರಿಂದ ಗ್ರಾಮಸ್ಥರು ಗುಂಪು-ಗುಂಪಾಗಿ ಹೋಗಿ ಚಕ್ಕಡಿಯಲ್ಲಿರುವ ಮೂರ್ತಿಗಳನ್ನು ಕಂಡು ಏಕೆ ಬಿಟ್ಟು ಹೋಗಿದ್ದಾರೆ ಎಂದು ಸಂಕೆ ವ್ಯಕ್ತಪಡಿಸುತ್ತಿದ್ದಾರೆ.
ಜಾರಕಿಹೊಳಿ ಕುಟುಂಬದಿಂದ ಲಕ್ಷ್ಮಣ್ ಸವದಿ ಟಾರ್ಗೆಟ್? ಅಥಣಿಯಲ್ಲಿ ಸವದಿ ವಿರುದ್ಧ ಮತ್ತೆ ಗುಡುಗಿದ ರಮೇಶ್ ಜಾರಕಿಹೊಳಿ!
ಈ ದೇವತೆ ಮೂರ್ತಿಗಳನ್ನು ಪೂಜೆ ಮಾಡಿ ಒಂದು ಊರಿನಿಂದ ಇನ್ನೊಂದು ಊರಿನ ಹದ್ದಿಗೆ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಮೂರ್ತಿಗಳನ್ನು ಏನೂ ಮಾಡಬೇಕೆಂಬುದು ತೋಚದಂತಾಗಿದೆ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ