
ಕೋಲಾರ (ಆ.18): ಅಕ್ರಮವಾಗಿ ಬಾಲಕಿಯರ ಹಾಸ್ಟೆಲ್ಗೆ ನುಗ್ಗಿದ ಯುವಕನನ್ನು ಬಂಧಿಸಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ನಲ್ಲಿ ನಡೆದಿದೆ. ಬೇತಮಂಗಲ ನಿವಾಸಿ ಮುರಳಿ (25) ಬಂಧಿತ ಆರೋಪಿ. ಮಧ್ಯರಾತ್ರಿ ಆರೋಪಿ ಯುವಕನೊಬ್ಬ ಬಾಲಕಿಯರ ವಸತಿ ನಿಲಯಕ್ಕೆ ನುಗ್ಗಿದ್ದ.
ಈ ಘಟನೆ ಕುರಿತು ಹಾಸ್ಟೆಲ್ ವಾರ್ಡನ್ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈ ಹಿನ್ನಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಮಧ್ಯರಾತ್ರಿ ಹಾಸ್ಟೆಲ್ಗೆ ನುಗ್ಗಿದ ಪರಿಣಾಮ ಭಯಭೀತರಾದ ವಿದ್ಯಾರ್ಥಿಗಳು ಇನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಈ ಹಾಸ್ಟೆಲ್ನಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 6 ರಿಂದ 10 ನೇ ತರಗತಿ ಓದುತ್ತಿರುವ 60 ಕ್ಕೂ ಹೆಚ್ವು ವಿದ್ಯಾರ್ಥಿನಿಯರು ದಾಖಲಾಗಿದ್ದು, ಈ ನಡುವೆ ಮಧ್ಯರಾತ್ರಿ ಅಪರಿಚಿತ ಯುವಕ ಹಾಸ್ಟೆಲ್ಗೆ ನುಗ್ಗಿದ ಪರಿಣಾಮ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.
ಮಾಟ ಮಂತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಸೋಲಾಗಿದೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ
ಹಾಸ್ಟೆಲ್ನಲ್ಲಿ ಭದ್ರತೆ ಹಾಗೂ ಸುರಕ್ಷತೆ ನೀಡದ ಹಾಸ್ಟೆಲ್ ವಾರ್ಡನ್ ಸೇರಿದಂತೆ ಅಧಿಕಾರಿಗಳ ವಿರುದ್ದ ಸ್ಥಳೀಯರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಷಯ ತಿಳಿದು ಬೇತಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷ ವಿನೂಕಾರ್ತಿಕ್ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿನಿಯರಿಗೆ ಧೈರ್ಯ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ