15 ಮಹಿಳೆಯರ ಮದುವೆಯಾಗಿ ವಂಚಿಸಿದ್ದವನ ಬಂಧನ: ವಿಧವೆ, ಮದುವೆ ಆಗದ ಮಧ್ಯ ವಯಸ್ಕರೇ ಈತನ ಟಾರ್ಗೆಟ್‌

Published : Jul 09, 2023, 12:08 PM IST
15 ಮಹಿಳೆಯರ ಮದುವೆಯಾಗಿ ವಂಚಿಸಿದ್ದವನ ಬಂಧನ: ವಿಧವೆ, ಮದುವೆ ಆಗದ ಮಧ್ಯ ವಯಸ್ಕರೇ ಈತನ ಟಾರ್ಗೆಟ್‌

ಸಾರಾಂಶ

ವಿಧವಾ ಹಾಗೂ ಮದುವೆಯಾಗದ ಮಧ್ಯ ವಯಸ್ಸಿನ ಮಹಿಳೆಯರನ್ನು ನಂಬಿಸಿ ಮದುವೆಯಾಗಿ ಹಣ ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾಗುತ್ತಿದ್ದ ಖತರ್ನಾಕ್‌ ಆರೋಪಿಯನ್ನು ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಮೈಸೂರು (ಜು.09): ವಿಧವಾ ಹಾಗೂ ಮದುವೆಯಾಗದ ಮಧ್ಯ ವಯಸ್ಸಿನ ಮಹಿಳೆಯರನ್ನು ನಂಬಿಸಿ ಮದುವೆಯಾಗಿ ಹಣ ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾಗುತ್ತಿದ್ದ ಖತರ್ನಾಕ್‌ ಆರೋಪಿಯನ್ನು ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈವರೆಗೂ ಈತ 15 ಮಹಿಳೆಯರಿಗೆ ಈ ರೀತಿ ವಂಚಿಸಿರುವ ಮಾಹಿತಿ ಸಿಕ್ಕಿದೆ.

ಬೆಂಗಳೂರಿನ ಬನಶಂಕರಿ 3ನೇ ಹಂತ ಹೊಸಕೆರೆಹಳ್ಳಿ ಕಾಳಿದಾಸನಗರ ನಿವಾಸಿ ಬಸವೇಗೌಡ ಎಂಬವರ ಪುತ್ರ ಕೆ.ಬಿ.ಮಹೇಶ್‌ (35) ಬಂಧಿತ ಆರೋಪಿ. ಈತನಿಂದ 2 ಲಕ್ಷ ನಗದು, 2 ಕಾರು, ಒಂದು ಬ್ರೇಸ್‌ಲೈಟ್‌, ಒಂದು ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್‌ ಹಾಗೂ 7 ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚೆನ್ನಾಗಿ ಅಡುಗೆ ಮಾಡ್ತಾನೆಂದು ಪ್ರತಿಸ್ಫರ್ಧಿಯ ಹತ್ಯೆ: ಆರೋಪಿಗಳ ಬಂಧನ

ಆರೋಪಿ ಮಹೇಶ್‌, ಮೈಸೂರಿನ ಹೇಮಲತಾ ಎಂಬವರಿಗೆ ತಾನು ಡಾಕ್ಟರ್‌ ಎಂದು ಹೇಳಿಕೊಂಡು ಶಾದಿ ಡಾ.ಕಾಂನಲ್ಲಿ ಪರಿಚಯಿಸಿಕೊಂಡು ನಂಬಿಸಿದ್ದ. ನಂತರ ಮದುವೆಯಾಗಿ ಅವರ ಹಣ ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ. ಈ ಸಂಬಂಧ ಹೇಮಲತಾ ನೀಡಿದ್ದ ದೂರಿನಂತೆ ಕುವೆಂಪುನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಮಹೇಶ್‌ನನ್ನು ಬಂಧಿಸಿದ್ದಾರೆ. ಆರೋಪಿ ವಿಚಾರಣೆ ವೇಳೆ ತಾನು ಡಾಕ್ಟರ್‌, ಎಂಜಿನಿಯರ್‌, ಸಿವಿಲ್‌ ಕಂಟ್ರಾಕ್ಟರ್‌ ಎಂದು ಹೇಳಿಕೊಂಡು 15 ಮಹಿಳೆಯರಿಗೆ ವಂಚಿಸಿರುವುದಾಗಿ ಹೇಳಿದ್ದಾನೆ.

ಏನಿದು ಪ್ರಕರಣ?: ಶಾದಿ.ಕಾಂ ಮೂಲಕ ಹೇಮಲತಾರನ್ನು ಸಂಪರ್ಕಿಸಿದ ಮಹೇಶ್‌, ಮೈಸೂರಿನ ಆರ್‌.ಟಿ.ನಗರದಲ್ಲಿರುವ ಮನೆ ತೋರಿಸಿ ನಂಬಿಸಿದ್ದಾನೆ. ಈತನ ಮಾತು ನಂಬಿದ ಹೇಮಲತಾ ಜ.28ರಂದು ವಿಶಾಖಪಟ್ಟಣದಲ್ಲಿ ಮದುವೆಯಾಗಿದ್ದಾರೆ. ನಂತರ ಮೈಸೂರಿನ ಮನೆಗೆ ಬಂದು ನೆಲೆಸಿದ್ದರು. ಈ ವೇಳೆ ವಿಜಯನಗರ 4ನೇ ಹಂತದಲ್ಲಿ ತಾನು ಕ್ಲಿನಿಕ್‌ ಓಪನ್‌ ಮಾಡಬೇಕೆಂದು ಕಾರಣ ನೀಡಿ 70 ಲಕ್ಷ ಸಾಲ ತೆಗೆದುಕೊಡುವಂತೆ ಒತ್ತಡ ಹೇರಿದ್ದು, ಹಣ ಕೊಡಲು ಹೇಮಲತಾ ಒಪ್ಪದೇ ಇದ್ದಾಗ ಕೊಲೆ ಬೆದರಿಕೆ ಹಾಕಿದ್ದಾನೆ. 

ಬೀದಿಬದಿ ವ್ಯಾಪಾರಿಗಳಿಗೇ ಕಂಟಕವಾದ ತರಕಾರಿ ಬೆಲೆ ಏರಿಕೆ: ಖರೀದಿಗೆ ಗ್ರಾಹಕರ ಹಿಂದೇಟು

ನಂತರ ಹೇಮಲತಾ ಅವರು ಮನೆಯಲ್ಲಿ ಇಲ್ಲದಿದ್ದಾಗ .15 ಲಕ್ಷ ಹಾಗೂ 20 ಗ್ರಾಂ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದ. ಕೆಲವೇ ದಿನಗಳಲ್ಲಿ ಬೆಂಗಳೂರಿನ ದಿವ್ಯಾ ಎಂಬವರು ಹೇಮಲತಾರ ಮನೆಗೆ ಬಂದು ತನ್ನನ್ನೂ ಮಹೇಶ್‌ ಮದುವೆ ಆಗಿದ್ದಾರೆಂದು ಮಾಹಿತಿ ತಿಳಿಸಿದ್ದಾರೆ. ಇದಾದ ನಂತರ ಮಹೇಶ್‌ ವಿರುದ್ಧ ಹೇಮಲತಾ ಕುವೆಂಪುನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಶುಕ್ರವಾರವೇ ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ