ಶಿವಮೊಗ್ಗದಲ್ಲಿ ಭಯಾನಕ ಘಟನೆ: ಬಾನೆಟ್‌ ಮೇಲೆ ಪೊಲೀಸ್‌ ಪೇದೆ ಇದ್ದರೂ ಕಾರು ಓಡಿಸಿದ ಭೂಪ!

Published : Oct 25, 2024, 09:48 AM IST
ಶಿವಮೊಗ್ಗದಲ್ಲಿ ಭಯಾನಕ ಘಟನೆ: ಬಾನೆಟ್‌ ಮೇಲೆ ಪೊಲೀಸ್‌ ಪೇದೆ ಇದ್ದರೂ ಕಾರು ಓಡಿಸಿದ ಭೂಪ!

ಸಾರಾಂಶ

ಪೇದೆ ಅಡ್ಡ ಬಂದರೂ ಅವರ ಮೇಲೆಯೇ ಕಾರು ಹತ್ತಿಸಿದ್ದಾನೆ. ಈ ವೇಳೆ ಪ್ರಭು ಬಾನೆಟ್‌ ಮೇಲೆ ಬಿದ್ದಿದ್ದರೂ ಆರೋಪಿ ಸುಮಾರು ನೂರು ಮೀಟರ್‌ಗೂ ಹೆಚ್ಚು ದೂರ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ. ಬಳಿಕ ಪ್ರಭು ಕಾರಿನಿಂದ ಕೆಳಗೆ ಹಾರಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.  

ಶಿವಮೊಗ್ಗ(ಅ.25):  ದಾಖಲೆಗಳ ಪರಿಶೀಲನೆಗಾಗಿ ಕಾರು ಅಡ್ಡಹಾಕಿದ ಪೊಲೀಸ್ ಪೇದೆ ಮೇಲೆ ಕಾರು ಹತ್ತಿಸಲೆತ್ನಿಸಿದ್ದಷ್ಟೇ ಅಲ್ಲದೆ, ಪೇದೆ ಬಾನೆಟ್ ಮೇಲೆ ಬಿದ್ದಿದ್ದರೂ 100 ಮೀಟರ್ ದೂರ ಕಾರು ಚಲಾಯಿಸಿಕೊಂಡು ಹೋದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 

ಕಾರು ಚಾಲಕನನ್ನು ಭದ್ರಾವತಿಯ ಕೇಬಲ್ ಆಪರೇಟರ್ ಮಿಥುನ್ ಜಗ ದಾಳೆ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಲು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸೂಚಿಸಿದ್ದಾರೆ. 

ಶಿವಮೊಗ್ಗದ ಟಿಪ್ಪು ನಗರದಲ್ಲಿ ವಿಚಿತ್ರ ಪ್ರಕರಣ; ಮೊಬೈಲ್ ಟವರ್‌ ಅನ್ನೇ ಕದ್ದ ಕಳ್ಳರು!

ಆಗಿದ್ದೇನು?: 

ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಬಳಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಟ್ರಾಫಿಕ್ ಸಿಬ್ಬಂದಿ ವಾಹನಗಳ ದಾಖಲೆ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಭದ್ರಾವತಿಯಿಂದ ಬಂದ ಕಾರೊಂದನ್ನು ಪೇದೆ ಪ್ರಭು ತಡೆದಿದ್ದಾರೆ. ಈ ವೇಳೆ ಚಾಲಕ, ಪೊಲೀಸ್ ಪೇದೆ ನಡುವೆ ಮಾತಿನ ಚಕಮಕಿ ನಡೆದಿದೆ. ಚಾಲಕ ಕಾರು ಚಲಾಯಿಸಿಕೊಂಡು ಹೋಗಲು ಮುಂದಾಗಿದ್ದಾನೆ. 

ಪೇದೆ ಅಡ್ಡ ಬಂದರೂ ಅವರ ಮೇಲೆಯೇ ಕಾರು ಹತ್ತಿಸಿದ್ದಾನೆ. ಈ ವೇಳೆ ಪ್ರಭು ಬಾನೆಟ್‌ ಮೇಲೆ ಬಿದ್ದಿದ್ದರೂ ಆರೋಪಿ ಸುಮಾರು ನೂರು ಮೀಟರ್‌ಗೂ ಹೆಚ್ಚು ದೂರ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ. ಬಳಿಕ ಪ್ರಭು ಕಾರಿನಿಂದ ಕೆಳಗೆ ಹಾರಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ