
ತುಮಕೂರು(ಫೆ.28): ಬೆಳಗ್ಗೆ ಎದ್ದು ನರಿ ಮುಖ ನೋಡಿದರೆ ಅದೃಷ್ಟ ಬರುತ್ತದೆ ಎಂಬ ಮೂಢನಂಬಿಕೆಗೆ ಜೋತು ಬಿದ್ದು ಕೋಳಿ ಫಾರಂ ಮಾಲೀಕನೊಬ್ಬ ಅಕ್ರಮವಾಗಿ ನರಿ ಸಾಕಿ ಈಗ ಜೈಲು ಸೇರಿದ್ದಾನೆ.
ತುಮಕೂರು ಜಿಲ್ಲೆ ಹೆಬ್ಬೂರು ಹೋಬಳಿಯ ನಾಗವಲ್ಲಿ ಗ್ರಾಮದ ನಿವಾಸಿ ಲಕ್ಷ್ಮೇಕಾಂತ್ ಬಂಧಿತನಾಗಿದ್ದು, ಆರೋಪಿಯಿಂದ ನರಿ ರಕ್ಷಣೆ ಮಾಡಲಾಗಿದೆ. ತನ್ನ ಕೋಳಿ ಫಾರಂನಲ್ಲಿ ಅಕ್ರಮವಾಗಿ ಲಕ್ಷ್ಮೇಕಾಂತ್ ನರಿ ಸಾಕಿರುವ ಕುರಿತು ಮಾಹಿತಿ ಪಡೆದ ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು, ದಿಢೀರ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ಶಾಲೆ, ಕಾಲೇಜು ದೋಚುವ ಗ್ಯಾಂಗ್ ಅರೆಸ್ಟ್
ಏಳು ತಿಂಗಳ ಹಿಂದೆ ತಮ್ಮೂರಿನ ಕೆರೆ ಸಮೀಪ ಲಕ್ಷ್ಮೀಕಾಂತ್ಗೆ ನರಿ ಮರಿಗಳು ಸಿಕ್ಕಿವೆ. ಆಗ ಅವುಗಳಲ್ಲಿ ಒಂದು ಮರಿಯನ್ನು ತಂದು ಪಂಜರದಲ್ಲಿಟ್ಟು ಸಾಕುತ್ತಿದ್ದ. ಬೆಳಗ್ಗೆ ಎದ್ದು ನರಿ ಮುಖ ನೋಡಿದರೆ ಅದೃಷ್ಟಬರುತ್ತದೆ ಎಂಬ ಮೂಢನಂಬಿಕೆಯಿಂದ ಈ ರೀತಿ ಮಾಡಿದ್ದಾಗಿ ವಿಚಾರಣೆ ವೇಳೆ ಆರೋಪಿ ಹೇಳಿಕೆ ಕೊಟ್ಟಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ