ಹುಬ್ಬಳ್ಳಿ: ಐವರು ಸುಪಾರಿ ಕಿಲ್ಲರ್‌ಗಳ ಹೆಡೆಮುರಿ ಕಟ್ಟಿದ ಪೊಲೀಸರು

Kannadaprabha News   | Asianet News
Published : Dec 09, 2020, 10:07 AM ISTUpdated : Dec 09, 2020, 10:09 AM IST
ಹುಬ್ಬಳ್ಳಿ: ಐವರು ಸುಪಾರಿ ಕಿಲ್ಲರ್‌ಗಳ ಹೆಡೆಮುರಿ ಕಟ್ಟಿದ ಪೊಲೀಸರು

ಸಾರಾಂಶ

ರಮೇಶ ಭಾಂಡಗೆ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌| ತನಿಖೆಯಲ್ಲಿ ತಪ್ಪೊಪ್ಪಿಕೊಂಡ ಆರೋಪಿಗಳು| ಬಂಧಿತರಿಂದ 6.10 ಲಕ್ಷ ರು. ಹಾಗೂ ಕೃತ್ಯಕ್ಕೆ ಬಳಸಿದ್ದ 2 ಬೈಕ್‌ ಹಾಗೂ 5 ಮೊಬೈಲ್‌ ವಶ| ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ ಆಯುಕ್ತರು| 

ಹುಬ್ಬಳ್ಳಿ(ಡಿ.09): ನಗರದ ಬಾಬಾಸಾನಗಲ್ಲಿಯಲ್ಲಿ ನಡೆದ ರಮೇಶ ಭಾಂಡಗೆ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಸುಪಾರಿ ಕೊಲೆ ಎಂಬುದನ್ನು ಶಹರ ಠಾಣೆ ಇನ್‌ಸ್ಪೆಕ್ಟರ್‌ ಎಂ.ಎಸ್‌. ಪಾಟೀಲ ನೇತೃತ್ವದ ತಂಡ ಪತ್ತೆ ಹೆಚ್ಚಿದ್ದು, ಸುಪಾರಿ ನೀಡಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ರಮೇಶ ಭಾಂಡಗೆ ಕೊಲೆಯನ್ನು ತಾನೇ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದ ಇಜಾಜಅಹ್ಮದ ಬಂಕಾಪುರನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇಷ್ಟಕ್ಕೆ ಸುಮ್ಮನೆ ಕೂತಿದ್ದರೇ ಪೊಲೀಸರಿಗೆ ಇದು ಸುಪಾರಿ ಕೊಲೆ ಎಂಬುದು ಪತ್ತೆಯಾಗುತ್ತಿರಲಿಲ್ಲ. ಆದರೆ, ಇಜಾಜ್‌ ಅಹ್ಮದ್‌ನ ಕಾಲ್‌ ಡಿಟೇಲ್ಸ್‌ ಪರಿಶೀಲಿಸಿದಾಗ ಇದು ಕೊಲೆಯಲ್ಲ, ಇದರ ಹಿಂದೆ ಬೇರೆಯದ್ದೇ ಸ್ವರೂಪವಿದೆ ಎಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರತ್ಯೇಕ ತಂಡ ರಚಿಸಿ ತನಿಖೆ ಚುರುಕುಗೊಳಿಸಿದಾಗ ಸುಪಾರಿ ಕೊಲೆ ಎಂಬುದನ್ನು ದೃಢಪಡಿಸಿಕೊಂಡಿದ್ದಾರೆ.

ಡ್ರಾಪ್‌ ಕೊಡುವ ನೆಪದಲ್ಲಿ ಸುಲಿಗೆ: ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು

ಈ ಕೊಲೆಗೆ 25 ಲಕ್ಷ ರು. ಕೊಡಲಾಗಿದೆ ಎಂಬುದನ್ನು ತನಿಖೆಯಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಮಾಡಲು ಸುಪಾರಿ ನೀಡಿದ್ದ ಹಳೇಹುಬ್ಬಳ್ಳಿ ಸದರಸೋಪಾ ನಿವಾಸಿ ರಫೀಕ ಅನ್ವರಸಾಬ ಜವಾರಿ, ವಸೀಮ್‌ ಖಾಜಾಸಾಬ ಬಂಕಾಪುರ, ಜಂಗ್ಲಿಪೇಟೆಯ ಶಿವಾಜಿ ದೇವೇಂದ್ರಪ್ಪ ಮಿಶಾಳ, ಮಯೂರನಗರದ ಫೈಯಾಜ್‌ ಅಹ್ಮದ ಜಾಫರಸಾಬ ಪಲ್ಲಾನ್‌ ಹಾಗೂ ಗದಗ ಮಹಾವೀರ ನಗರದ ತೌಶೀಫ್‌ ಮಹ್ಮದಇಸಾಕ್‌ ನರಗುಂದ ಎಂಬುವವರನ್ನು ಬಂಧಿಸಿದ್ದಾರೆ

ಇವರಿಂದ 6.10 ಲಕ್ಷ ರು. ಹಾಗೂ ಕೃತ್ಯಕ್ಕೆ ಬಳಸಿದ್ದ 2 ಬೈಕ್‌ ಹಾಗೂ 5 ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖಾ ತಂಡಕ್ಕೆ ಆಯುಕ್ತರು ಬಹುಮಾನ ಘೋಷಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ