ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ASI, ಮಹಿಳೆ ಜೊತೆ ಠಾಣೆಯಲ್ಲೇ ರಾಸಲೀಲೆ!

Published : Aug 29, 2022, 08:17 PM IST
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ASI, ಮಹಿಳೆ ಜೊತೆ ಠಾಣೆಯಲ್ಲೇ ರಾಸಲೀಲೆ!

ಸಾರಾಂಶ

ಪ್ರತಿ ದಿನ ಮಹಿಳೆಯರ ಜೊತೆ ಚಕ್ಕಂದ, ಠಾಣೆಯಲ್ಲೇ ಸರಸ.. ಇದು ದಿನವೂ ನಡೆಯುತ್ತಿತ್ತು. ದಿಢೀರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಠಾಣೆಗೆ ಭೇಟಿ ನೀಡಿದಾಗ ಅಧಿಕಾರಿಗೆ ಕಂಡಿದ್ದು ರಾಸಲೀಲೆ. ಇದೀಗ ಹಿರಿಯ ASI ಅಮಾನತ್ತುಗೊಂಡಿದ್ದಾರೆ. ಇತ್ತ ಆಂತರಿಕ ತನಿಖೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಈ ಪೊಲೀಸಪ್ಪನ ಕೆಲ ವಿಡಿಯೋಗಳು ಹೊರಬಂದಿದೆ

ವಿಶಾಖಪಟ್ಟಣಂ(ಆ.29):  ಪೊಲೀಸ್ ಠಾಣೆಯಾದ ಸಾರ್ವಜನಿಕರು ಇಣುಕಿ ನೋಡುವ,, ಹತ್ತಿ ಇಳಿಯುವ ಸಾಹಸಕ್ಕೆ ಕೈಹಾಕಿಲ್ಲ. ಇದು ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್‌ಗೆ ವರವಾಗಿತ್ತು. ಹೀಗಾಗಿ ASIಗೆ ರಾತ್ರಿಯಾದರೆ ಸಾಕು ಪೊಲೀಸ್ ಠಾಣೆಯನ್ನೇ ಬೆಡ್ ರೂಂ ಮಾಡಿಕೊಂಡಿದ್ದ. ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೊಡಗಿದ್ದ.  ಕಂಠಪೂರ್ತಿ ಕುಡಿದು ಒಬ್ಬೊಬ್ಬ ಮಹಿಳೆಯರ ಜೊತೆ ಸರಸ ಸಲ್ಲಾಪ ನಡೆಸುತ್ತಿದ್ದ. ಆದರೆ ದಿಢೀರ್ ಆಗಿ ಹಿರಿಯ ಅಧಿಕಾರಿ ಪೊಲೀಸ್ ಠಾಣೆಗೆ ಎಂಟ್ರಿಕೊಟ್ಟಿದ್ದಾರೆ. ಹಿರಿಯ ಅಧಿಕಾರಿ ಒಂದು ಕ್ಷಣ ಗೊಂದಲಕ್ಕೀಡಾಗಿದ್ದಾರೆ. ತಾನೂ ಯಾರದ್ದೂ ಮನೆಯ ಬೆಡ್ ರೂಂ ಗೆ ಪ್ರವೇಶ ಮಾಡಿದೆನಾ ಅಥವಾ ಪೊಲೀಸ್ ಠಾಣೆಗೆ ಬಂದಿದ್ದೇನಾ ಅನ್ನೋ ಗೊಂದಲ ಶುರುವಾಗಿದೆ. ಕಾರಣ ASI ದೃಶ್ಯಗಳು ಹಾಗಿತ್ತು. ಹಿರಿಯ ಅಧಿಕಾರಿ ಕೈಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ASI ಅಮಾನತ್ತುಗೊಂಡಿದ್ದಾರೆ.  ವಿಶಾಖಪಟ್ಟಣದ ಕೊಥಕೋಟ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. 

ರವಿಕಾಮಥಮ್ ಪೊಲೀಸ್ ಠಾಣೆಯ ಎಎಸ್ಐ ಅಪ್ಪಾ ರಾವ್ ಅವರನ್ನು ಅದೇ ಜಿಲ್ಲೆಯ ಕೊಥಕೊಟ ಪೊಲೀಸ್ ಠಾಣೆಯ ಸಿಬ್ಬಂದಿ ಕೊರತೆಯಿಂದ ಕೆಲ ದಿನಗಳ ಕಾಲ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ಅದರಲ್ಲೂ ಪ್ರಮುಖವಾಗಿ ರಾತ್ರಿ ಪಾಳಿಯ ಜವಾಬ್ದಾರಿ ನೀಡಲಾಗಿತ್ತು. ಈ ಪೊಲೀಸ್ ಠಾಣೆ ಪಟ್ಟಣದಿಂದ ಹೊರವಲಯದಲ್ಲಿರುವ ಎಎಸ್ಐ ಅಪ್ಪಾ ರಾವ್‌ಗೆ ಸಿಕ್ಕಿದ್ದೇ ಚಾನ್ಸ್ ಎಂಬಂತಾಗಿದೆ. 

8 ವರ್ಷದ ಪಾಕ್ ಹಿಂದೂ ಬಾಲಕಿ ಮೇಲೆ ಸಾಮೂಹಿತ ಅತ್ಯಾಚರ ನಡೆಸಿ ಕಣ್ಣು ಕಿತ್ತ ದುರುಳರು!

ಕಂಠಪೂರ್ತಿ ಕುಡಿದು ಕರ್ತವ್ಯಕ್ಕೆ ಹಾಜರಾದ ಅಪ್ಪಾ ರಾವ್, ರಾತ್ರಿ 10.30 ಸುಮಾರಿಗೆ ಮಹಿಳೆಯೊಬ್ಬರನ್ನು ಕರೆದುಕೊಂಡು ಠಾಣೆಗೆ ಬಂದಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪೊಲೀಸ್ ಪೇದೆ, ಈ ರೀತಿಯ ವರ್ತನೆ ಸರಿಯಲ್ಲ. ತಕ್ಷಣವೇ ಮಹಿಳೆಯನ್ನು ಸುರಕ್ಷಿತವಾಗಿ ಬಿಡುವಂತೆ ತಾಕೀಕು ಮಾಡಿದ್ದಾರೆ. ಇದರಿಂದ ಕೆರಳಿದ ಎಎಸ್ಐ ಅಪ್ಪಾ ರಾವ್, ನಾನು ಎಎಸ್ಐ ನಿನ್ನ ಆದೇಶ ಪಾಲಿಸುವುದು ನನ್ನ ಕೆಲಸವಲ್ಲ ಎಂದು ಗದರಿಸಿದ್ದಾನೆ.

ಇತ್ತ ಪೊಲೀಸ್ ಪೇದೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಇದರಿಂದ ಹಿರಿಯ ಅಧಿಕಾರಿಗಳ ತಂಡ ನೇರವಾಗಿ ಪೊಲೀಸ್ ಠಾಣೆಗೆ ಆಗಮಿಸಿದೆ. ಈ ವೇಳೆ ಅಪ್ಪಾ ರಾವ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ತಕ್ಷಣವೇ ಅಪ್ಪಾ ರಾವ್ ಅವರನ್ನು ಅಮಾನತುಗೊಳಿಸಾಗಿದೆ. ಇದೀಗ ತನಿಖೆ ನಡೆಯುತ್ತಿದೆ. ಇನ್ನೇನು ಕೆಲ ತಿಂಗಳಲ್ಲಿ ನಿವೃತ್ತಿಯಾಗಬೇಕಿದ್ದ ಅಪ್ಪಾ ರಾವ್ ಅಸಲಿಯತ್ತು ಇದೀಗ ಹೊರಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?