'ಪಬ್ಲಿಕ್‌ನಲ್ಲಿ ಮೂತ್ರಮಾಡಬೇಡಿ'  ಬುದ್ಧಿ ಹೇಳಿದ್ದಕ್ಕೆ ಜಜ್ಜಿ ಕೊಂದರು

Published : Jun 06, 2021, 05:30 PM IST
'ಪಬ್ಲಿಕ್‌ನಲ್ಲಿ ಮೂತ್ರಮಾಡಬೇಡಿ'  ಬುದ್ಧಿ ಹೇಳಿದ್ದಕ್ಕೆ ಜಜ್ಜಿ ಕೊಂದರು

ಸಾರಾಂಶ

* ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಬೇಡಿ * ಬುದ್ಧಿವಾದ  ಹೇಳಿದ ವ್ಯಕ್ತಿಯನ್ನು ಥಳಿಸಿದ ದುಷ್ಕರ್ಮಿಗಳು * ಕಾರಿನ ಅಡಿಗೆ ದೂಡಿ ಹಲ್ಲೆ * ಹಲ್ಲೆಗೊಳಗಾದ ವ್ಯಕ್ತಿ ಸಾವು 

ಕಾನ್ಪುರ(ಜೂ.  06)  ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಬೇಡಿ ಎಂದು ಬುದ್ಧಿಹೇಳಿದ ಮನುಷ್ಯನ  ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.  ಮೆಕ್ಯಾನಿಕ್ ಆಗಿ  ಕೆಲಸ ಮಾಡುತ್ತಿದ್ದ ವ್ಯಕ್ತಿ ತನ್ನ ಅಂಗಡಿ ಸಮೀಪ ಮೂತ್ರ ವಿಸರ್ಜನೆ ಮಾಡುತ್ತಿದ್ದ ನಾಲ್ವರನ್ನು ಪ್ರಶ್ನೆ ಮಾಡಿದ್ದಾನೆ. ಇದೇ ಕಾರಣಕ್ಕೆ ಕ್ರೋಧಗೊಂಡ ಗುಂಪು ಆತನನ್ನು ಕಾರಿನ ಅಡಿಗೆ ತಳ್ಳಿ ಥಳಿಸಿದೆ. ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಮದ್ಯದ ನಶೆಯಲ್ಲಿದ್ದ ಆರೋಪಿಗಳು ಪ್ರಶ್ನೆ ಮಾಡಿದ ಅಶ್ರಫ್ ಮೇಲೆ ದಾಳಿ ಮಾಡಿದ್ದಾರೆ. ಫಹೀಮಾಬಾದ್ ಚಮಂಗಂಜ್ ಅಶ್ರಫ್ ನೌಬಸ್ತಾದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು.

ತಂಗಿ ಎಂಗೇಜ್‌ ಮೆಂಟ್ ದಿನ ತರಕಾರಿ ತರಲು ಹೋದ ಅಣ್ಣನ ಕೊಲೆ

ಶುಕ್ರವಾರ ರಾತ್ರಿ 11.30 ರ ಸುಮಾರಿಗೆ ಅಶ್ರಫ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ  ಎದುರಿಗೆ ನಿಲ್ಲಿಸಿದ್ದ ಕಾರನಿನಲ್ಲಿ ಏನೋ ನಡೆಯುತ್ತಿರುವುದು ಗೊತ್ತಾಗಿದೆ.  ಮದ್ಯದ ಸಮಾರಾಧನೆಯಲ್ಲಿದ್ದ ನಾಲ್ವರು ವ್ಯಕ್ತಿಗಳು ಅಲ್ಲಿಯೇ ಮೂತ್ರ ವಿಸರ್ಜನೆ ಮಾಡಲು ಮುಂದಾಗಿದ್ದಾರೆ. ಅಶ್ರಫ್ ಇದನ್ನು ಪ್ರಶ್ನೆ ಮಾಡಿದ್ದಾರೆ.

ಅಶ್ರಫ್ ಗೆ ಬೆದರಿಕೆ  ಹಾಕಿದ ದುಷ್ಕರ್ಮಿಗಳು  ನಿನ್ನ ಮಾಲೀಕ ಅನುರಾಗ್ ಕಪೂರ್ ನನ್ನು ಕರೆದುಕೊಂಡು ಬಾ.. ಆತನ ಬಳಿಯೇ ಮಾತನಾಡುತ್ತೇವೆ ಎಂದು ಅವಾಜ್ ಹಾಕಿದ್ದಾರೆ. ಘಟನೆಯನ್ನು ದೂರದಿಂದ ನೋಡಿದ ವ್ಯಕ್ತಿಯೊಬ್ಬರು ಪೊಲೀಸರು ಮತ್ತು ಆಸ್ಪತ್ರೆಗೆ ಮಾಹಿತಿ ನೀಡಿದ್ದಾಋಎ. ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಫಲಕಾರಿಯಾಗಲಿಲ್ಲ. ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!