
ಬೆಂಗಳೂರು (ಫೆ.19): ಕ್ಷುಲ್ಲಕ ಕಾರಣಕ್ಕೆ ತುಂಬು ಗರ್ಭಿಣಿ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ ನಡೆದಿದ್ದು ಬೆಂಗಳೂರಿನ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೊಟ್ಟೆಗೆ ಪೆಟ್ಟು ಬಿದ್ದ ಪರಿಣಾಮ ಮಗು ದುರ್ಮರಣಕ್ಕೀಡಾಗಿದೆ.
ಜಯಶೀಲಾ ಎಂಬ ಗರ್ಭಿಣಿಗೆ ಒದ್ದು ಹಲ್ಲೆ ಮಾಡಿರುವ ಆರೋಪಿಗಳು. ಪದ್ಮಮ್ಮ, ಕಾವ್ಯ ಎಂಬುವವರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.
ಜಯಶೀಲಾ ಹೋಟೆಲ್ ಗೆ ಬಂದಾಗ ಗಲಾಟೆಯಾಗಿದೆ. ಆಗ ಗಲಾಟೆ ಬೇಡವೆಂದು ರಾಜಿ ಮಾಡಿಕೊಂಡಿದ್ದಾರೆ. ಗೋವಿಂದರಾಜನಗರ ಪೊಲಿಸ್ ಆದ್ರೆ ರಾಜಿ ಬಳಿಕ ಮತ್ತೆ ಸಿಕ್ಕಾಗ ಗರ್ಭಿಣಿ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳು. ಈ ವೇಳೆ ತುಂಬು ಗರ್ಭಿಣಿ ಎಂಬುದುನ್ನು ನೋಡದೇ ಜಯಶೀಲಾ ಎಂಬಾಕೆಗೆ ಒದ್ದು ಹಲ್ಲೆ ಮಾಡಿದ್ದಾರೆ. ಈ ವೇಳೆ ಹೊಟ್ಟೆಗೆ ಗಂಭೀರ ಪೆಟ್ಟು ಬಿದ್ದು ಮಗು ಮೃತಪಟ್ಟಿದೆ.
ಘಟನೆ ಸಂಬಂಧ ಇದೀಗ ಜಯಶೀಲಾ ಎಂಬುವವರಿಂದ ಠಾಣೆಗೆ ದೂರು ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ವಿಚಾರಣೆಗೆ ಮುಂದಾಗಿರುವ ಪೊಲೀಸರು.
ನಿರ್ಮಾಪಕಿಯಿಂದ ಹಣ ಸುಲಿಯಲು ಕಿಡ್ನಾಪ್ ಕಥೆ ಕಟ್ಟಿದ ಕಾರು ಚಾಲಕ; ಮುಂದೆ ನಡೆದಿದ್ದೇನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ