ಬೆಳಗಾವಿ: ಹಿಂಡಲಗಾ ಜೈಲಲ್ಲಿ ವಿಚಾರಣಾಧೀನ‌ ಕೈದಿ ಮೇಲೆ ನಾಲ್ವರ ಗುಂಪಿನಿಂದ ಮಾರಣಾಂತಿಕ ಹಲ್ಲೆ

Published : Oct 05, 2024, 10:56 PM IST
ಬೆಳಗಾವಿ: ಹಿಂಡಲಗಾ ಜೈಲಲ್ಲಿ ವಿಚಾರಣಾಧೀನ‌ ಕೈದಿ ಮೇಲೆ ನಾಲ್ವರ ಗುಂಪಿನಿಂದ ಮಾರಣಾಂತಿಕ ಹಲ್ಲೆ

ಸಾರಾಂಶ

ತೀವ್ರ ಗಾಯಗೊಂಡ ಹಿತೇಶಕುಮಾರನನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿತೇಶಕುಮಾರನು ಆರೋಪಿಗಳ ಸಂಬಂಧಿಯೊಬ್ಬರ ಮೇಲೆ ಈಚೆಗೆ ಹಲ್ಲೆ ಮಾಡಿದ್ದ. ಅದೇ ಸಿಟ್ಟಿನಿಂದ ಈ ಹಲ್ಲೆ ನಡೆದಿದೆ. 

ಬೆಳಗಾವಿ(ಅ.05): ವಿಚಾರಣಾಧೀನ‌ ಕೈದಿ ಮೇಲೆ ನಾಲ್ವರ ಗುಂಪಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇಂದು(ಶನಿವಾರ) ನಡೆದಿದೆ. 

ಬೆಳಗಾವಿಯ ರಾಮತೀರ್ಥ ನಗರದ ನಿವಾಸಿ ಹಿತೇಶಕುಮಾರ ಚವ್ಹಾಣ್ ಹಲ್ಲೆಗೊಳಗಾದ ವಿಚಾರಣಾಧೀನ‌ ಕೈದಿಯಾಗಿದ್ದಾನೆ. ವಿಚಾರಣಾಧೀನ ಕೈದಿಗಳಾದ ಬಸವರಾಜ ಹೊಳೆಪ್ಪ ದಡ್ಡಿ, ಬಸವಣ್ಣಿ ಸಿದ್ದಪ್ಪ ನಾಯ್ಕ, ಸವಿನ್ ಸಿದ್ದಪ್ಪ ದಡ್ಡಿ, ಪ್ರದಾನಿ ಶೇಖರ ವಾಘಮೋಡೆ ಆರೋಪಿಗಳಾಗಿದ್ದಾರೆ. 

ಹಿಂಡಲಗಾ ಜೈಲಿನಲ್ಲಿ ಕೈದಿಯಿಂದ ಮತ್ತೊಬ್ಬ ಕೈದಿಯ ಕೊಲೆಗೆ ಯತ್ನ: ಆಸ್ಪತ್ರೆಗೆ ದಾಖಲು

ತೀವ್ರ ಗಾಯಗೊಂಡ ಹಿತೇಶಕುಮಾರನನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿತೇಶಕುಮಾರನು ಆರೋಪಿಗಳ ಸಂಬಂಧಿಯೊಬ್ಬರ ಮೇಲೆ ಈಚೆಗೆ ಹಲ್ಲೆ ಮಾಡಿದ್ದ. ಅದೇ ಸಿಟ್ಟಿನಿಂದ ಈ ಹಲ್ಲೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ