
ಬೆಳಗಾವಿ(ಫೆ.14): ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಗಲಾಟೆ ನಡೆದ ಪರಿಣಾಮ ಯೋಧರ ಕುಟುಂಬದ ಮೇಲೆ ಪಕ್ಕದ ಮನೆಯವರು ಹಲ್ಲೆ ಮಾಡಿದ ಘಟನೆ ತಾಲೂಕಿನ ಸೋಮನಟ್ಟಿ ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಬಸಪ್ಪ ನಂದ್ಯಾಗೋಳ ಹಾಗೂ ಬಾಳಪ್ಪ ಯದ್ದಲಗುಡ್ಡ ಕುಟುಂಬ ಮಧ್ಯೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಸಪ್ಪ ನಂದ್ಯಾಗೋಳರವರ ಮೊಮ್ಮಗಳನ್ನು ಬೈದಿದ್ದನ್ನ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬಾಳಪ್ಪ ಯದ್ದಲಗುಡ್ಡ ಅವರ ಕುಟುಂಬ ಹಲ್ಲೆ ಮಾಡಿದೆ ಎಂದು ಹೇಳಲಾಗುತ್ತಿದೆ.
ಪೊಲೀಸರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ: ರೌಡಿಶೀಟರ್ ಕಾಲಿಗೆ ಗುಂಡೇಟು
ಯೋಧನ ತಂದೆ ಬಸಪ್ಪ, ತಾಯಿ ನಾಗವ್ವ, ತಮ್ಮ ಲಕ್ಷ್ಮಣ್ ಮೇಲೆ ಹಲ್ಲೆ ನಡೆಸಲಾಗಿದೆ. ಯೋಧನ ತಮ್ಮ ಲಕ್ಷ್ಮಣ್ಗೆ ಗಂಭೀರವಾದ ಗಾಯವಾಗಿದ್ದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಾಳಪ್ಪ ಯದ್ದಲಗುಡ್ಡ ಸೇರಿ ಒಟ್ಟು 9 ಜನರ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ