
ಮಂಗಳೂರು(ಡಿ.18): ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಯುವಕನನ್ನ ಕಂಬಕ್ಕೆ ಕಟ್ಟಿ ಬಾಲಕಿಯ ಕಡೆಯವರು ಹಲ್ಲೆ ಮಾಡಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಯುವಕ ಗಂಭೀರವಾಗಿ ಗಾಯಯೊಂಡಿದ್ದನು.
ಡಿ. 13 ರಂದು ಕರೆಕಾಡು ಎಂಬಲ್ಲಿ ನಡೆದಿದ್ದ ಘಟನೆ ನಡೆದಿತ್ತು. ಥಳಿತಕ್ಕೊಳಗಾದ ಯುವಕ ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ್ದನು. ಬಾಲಕಿಯಿಂದ ಮಾಹಿತಿ ಪಡೆದು ಪೋಷಕರು ಹಿಂಬಾಲಿಸಿದ್ದರು. ಕರೆಕಾಡು ಪ್ರದೇಶದಲ್ಲಿ ಯುವಕಮತ್ತೆ ಬಾಲಕಿಗೆ ಕಿರುಕುಳ ನೀಡಿದ್ದನು. ಈ ವೇಳೆ ಪೋಷಕರು ಹಾಗೂ ಜೊತೆಗಿದ್ದವರು ಯುವಕನ ಮೇಲೆ ಹಲ್ಲೆ ಮಾಡಿದ್ದರು. ಕಿರುಕುಳ ನೀಡುತ್ತಿದ್ದ ಯುವಕನ ಕಂಬಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿದ್ದರು. ಬಳಿಕ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
Mangaluru; ಮತ್ತೆ ನೈತಿಕ ಪೊಲೀಸ್ ಗಿರಿ, ಮರಕ್ಕೆ ಕಟ್ಟಿ ಕಾರ್ಮಿಕನಿಗೆ ಥಳಿತ
ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ದೂರಿನ ಮೇರೆಗೆ ಮುಲ್ಕಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಹೇಳಿಕೆ ಆಧರಿಸಿ ಹಲ್ಲೆ ನಡೆಸಿದವರ ಮೇಲೂ ದೂರು ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ