
ರಾಮನಗರ(ಆ.18): ಅಸಿಸ್ಟೆಂಟ್ ಪ್ರೊಫೆಸರ್ವೊಬ್ಬ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಮಕೃಷ್ಣ ಹೆಚ್.ಆರ್. ಎಂಬಾತನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದವನಾಗಿದ್ದಾನೆ.
ರಾಮನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಲ್ಲಿ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರಾಮಕೃಷ್ಣ ಹೆಚ್.ಆರ್. ವಿದ್ಯಾರ್ಥಿನಿಗೆ ವಾಟ್ಸಪ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುವ ಮೂಲಕ ಟಾರ್ಚರ್ ನೀಡಿದ್ದಾರೆ.
ಗದಗ: ಕುಡಿದು ಕಿರಿಕ್ ಮಾಡ್ತಿದ್ದ ತಂದೆಯನ್ನೇ ಬರ್ಬರವಾಗಿ ಕೊಂದ ಮಗ
ಒಂದು ತಿಂಗಳ ಹಿಂದಷ್ಟೇ ಕಾಲೇಜಿಗೆ ವಿದ್ಯಾರ್ಥಿನಿ ಸೇರಿದ್ದಳು. ಕಾಮುಕ ರಾಮಕೃಷ್ಣ ರಾತ್ರಿ ವೇಳೆ ವಿದ್ಯಾರ್ಥಿನಿಗೆ ಅಶ್ಲೀವಾಗಿ ಮೆಸೇಜ್ ಕಳುಹಿಸಿದ್ದಾನೆ. ಈ ಸಂಬಂಧ ಕಾಲೇಜು ಆಡಳಿತ ಮಂಡಳಿಗೆ ವಿದ್ಯಾರ್ಥಿನಿಯ ಪೋಷಕರು ದೂರು ನೀಡಿದ್ದಾರೆ.
ಏತನ್ಮಧ್ಯೆ ಕಾಲೇಜಿಗೆ ವಿದ್ಯಾರ್ಥಿ ಪೋಷಕರು ಆಗಮಿಸುತ್ತಿದ್ದಂತೆ ಪ್ರಾಧ್ಯಾಪಕ ರಾಮಕೃಷ್ಣ ಎಸ್ಕೇಪ್ ಆಗಿದ್ದಾನೆ. ಇದೇ ರೀತಿ ಕಳೆದ ವರ್ಷ ಕೂಡ ರಾಮಕೃಷ್ಣ ಮತ್ತೊಬ್ಬ ವಿದ್ಯಾರ್ಥಿನಿಗೆ ಟಾರ್ಚರ್ ಕೊಟ್ಟಿದ್ದ ಅಂತ ತಿಳಿದು ಬಂದಿದೆ.
ಪ್ರಾಧ್ಯಾಪಕ ಟಾರ್ಚರ್ನಿಂದ ಬೇಸತ್ತ ವಿದ್ಯಾರ್ಥಿನಿ ಟಿಸಿ ಪಡೆದು ಬೇರೆ ಕಾಲೇಜಿಗೆ ಸೇರಿಕೊಂಡಿದ್ದಾಳೆ. ಈ ಸಂಬಂಧ ವಿದ್ಯಾರ್ಥಿನಿ ರಾಮನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ