ಶಿವಮೊಗ್ಗ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ

Published : Jun 25, 2023, 11:53 AM IST
ಶಿವಮೊಗ್ಗ: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ

ಸಾರಾಂಶ

ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ.


ಶಿವಮೊಗ್ಗ (ಜೂ.25) : ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ.

ಶಿವಮೊಗ್ಗ ವಿನೋಬನಗರದಲ್ಲಿ ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಸುಳಿವು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳು ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಐಪಿಎಸ್ ಬಿಂದುಮಣಿ ನೇತೃತ್ವದಲ್ಲಿ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು.

Wildlife: ಸುಣ್ಣದ ಡಬ್ಬಿ ನುಂಗಿ ನರಳಾಡಿದ ನಾಗರಹಾವಿಗೆ ಡಾಕ್ಟರ್ ಯಶಸ್ವಿ ಶಸ್ತ್ರ ಚಿಕಿತ್ಸೆ!

ಸದ್ಯ ಏಳು ಸಂತ್ರಸ್ತ ಮಹಿಳೆಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು

ಜಿಲ್ಲೆಯಲ್ಲಿ ವೇಶ್ಯಾವಾಟಿಕೆ ಜಾಲ ಹೆಚ್ಚಳವಾಗಿದ್ದು. ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಕಳೆದ ಕೆಲದಿನಗಳ ಹಿಂದೆಯಷ್ಟೇ ಶಿರಾಳಕೊಪ್ಪದ ಪೊಲೀಸರು ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ತೀರ್ಥಹಳ್ಳಿ ಪಟ್ಟಣದ ಮಧ್ಯಭಾಗದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ರಾತ್ರಿ ವೇಳೆ ಮನೆಯ ಮೇಲೆ ದಾಳಿ ನಡೆಸಿದ್ದರು. ಪೊಲೀಸರು. ಕಮ್ಮರಡಿಯ ಪ್ರಶಾಂತ್ ಮತ್ತು ಮೇಲಿನ ಕುರುವಳ್ಳಿಯ ಮಂಜುನಾಥ್‌ ಬಂಧಿಸಿದ್ದರು. ಬೆಂಗಳೂರು ಮೂಲದ ಇಬ್ಬರು ಯುವತಿಯರನ್ನು ಕರೆಯಿಸಿ ಬಾಡಿಗೆ ಮನೆಯನ್ನು ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. 

ಇದೀಗ ತಿಂಗಳು ಕಳೆಯುವ ಮೊಲದೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿರುವುದು ಜಿಲ್ಲೆಯಲ್ಲಿ ವೇಶ್ಯಾವಾಟಿಕೆ ಜಾಲ ಬೀಡುಬಿಟ್ಟಿದೆ. ಜಿಲ್ಲೆಯ ಪೊಲೀಸರು ಹೈಅಲರ್ಟ್ ಆಗಿದ್ದು, ಎಲ್ಲೆಡೆ ಮಾಹಿತಿ ಕಲೆಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ ವೇಶ್ಯಾವಾಟಿಕೆ ದಂಧೆಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು