
ಕಾರವಾರ (ಅ.5) : ರಾಜ್ಯದಲ್ಲಿ ದಿನನಿತ್ಯ ಒಂದಿಲ್ಲೊಂದು ದರೋಡೆ ಪ್ರಕರಣಗಳು ದಾಖಲಾಗುತ್ತಿವೆ. ಸರ್ಕಾರ ಕಾನೂನು ಸುವ್ಯವಸ್ಥೆ ಸದೃಢವಾಗಿದೆ ಎಂದು ಹೇಳಿಕೊಂಡರೂ ರಸ್ತೆ ಮಧ್ಯೆ ವಾಹನಗಳನ್ನು ನಿಲ್ಲಿಸಿ ಚಿನ್ನಾಭರಣ, ಹಣ ದೋಚುವ ಕೃತ್ಯಗಳಿಗೆ ಕೊನೆ ಇಲ್ಲದಂತಾಗಿದೆ.
ಕೇರಳಕ್ಕೆ ತೆರಳುತ್ತಿದ್ದ ಚಿನ್ನದ ವ್ಯಾಪಾರಿಗಳಿಂದ 2.11 ಕೋಟಿ ರೂ. ದರೋಡೆ ಮಾಡಿರುವ ಕೃತ್ಯ ಕಳೆದ ಶನಿವಾರ ರಾತ್ರಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನಿಪ್ಪಾಣಿಯಿಂದ ಮಂಗಳೂರು ಮಾರ್ಗವಾಗಿ ಕೇರಳ ಕಡೆಗೆ ಈರ್ವರು ಚಿನ್ನದ ವ್ಯಾಪಾರಿಗಳು ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಮಾರ್ಗಮಧ್ಯೆ ಅಂದ್ರೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ದಾಟುತ್ತಿದ್ದಂತೆ 2 ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿರುವ ಏಳೆಂಟು ಮಂದಿ ದರೋಡೆಕೋರರು ಚಿನ್ನದ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಅಡ್ಡ ಹಾಕಿ ಹಲ್ಲೆ ನಡೆಸಿದ್ದಾರೆ. ಬಳಿಕ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ.
ಈ ಘಟನೆ ಶನಿವಾರ ನಡೆದಿದ್ದರೂ, ದರೋಡೆಗೆ ಒಳಗಾದ ಚಿನ್ನದ ವ್ಯಾಪಾರಿಗಳು ಕೆಲವು ದಾಖಲೆಗಳನ್ನು ಹೊಂದಾಣಿಸಿಕೊಂಡು ಠಾಣೆಗೆ ಬರಲು ವಿಳಂಬವಾಗಿದೆ. ನಿನ್ನೆ ದರೋಡೆ ನಡೆದ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆಹಚ್ಚಲು ಮುಂದಾಗಿರುವ ಪೊಲೀಸರು, ದರೋಡೆ ನಡೆದ ಸ್ಥಳ ಪರಿಶೀಲಿಸಿದ್ದಾರೆ. ಕಾರಿನ ವಿಂಡೋ ಗಾಜಿನ ಚೂರುಗಳು ಪತ್ತೆಯಾಗಿವೆ. ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.
ಹಾಡಹಗಲೇ 43 ಲಕ್ಷ ನಗದು, 250 ಗ್ರಾಂ ಚಿನ್ನ ದೋಚಿ ಖತರ್ನಾಕ್ ಗ್ಯಾಂಗ್ ಪರಾರಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ