
ಬೆಂಗಳೂರು(ಡಿ.09): ಟರ್ಕಿ ದೇಶದ ನಿಷೇಧಿತ ಕೋಟ್ಯಂತರ ಮೌಲ್ಯದ ನೋಟುಗಳ ಚಲಾವಣೆಗೆ ಯತ್ನಿಸಿದ್ದ ಇಬ್ಬರು ಎಲೆಕ್ಟ್ರಾನಿಕ್ಸಿಟಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸತ್ಯವೇಲು ಹಾಗೂ ಧರ್ಮಪುರಿಯ ಶರವಣ ಬಂಧಿತರಾಗಿದ್ದು, ಆರೋಪಿಗಳಿಂದ 4.5 ಕೋಟಿ ಮೌಲ್ಯದ 5 ಲಕ್ಷ ಮುಖ ಬೆಲೆಯ 97 ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ವೇಲಂಕಣ್ಣಿ ಸರ್ಕಲ್ಬಳಿ ಸೋಮವಾರ ಮಧ್ಯಾಹ್ನ ಆರೋಪಿಗಳು ಟರ್ಕಿ ನೋಟು ಚಲಾವಣೆಗೆ ಯತ್ನಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮದುವೆಗಳೇ ಖದೀಮರ ಟಾರ್ಗೆಟ್: ಸ್ವಲ್ಪ ಯಾಮಾರಿದ್ರು ಚಿನ್ನದ ಸರ ಕಿತ್ತು ಪರಾರಿ...!
ತಮಿಳುನಾಡಿನಿಂದ ಬೆಂಗಳೂರಿಗೆ ಪಯಣಿಸುವ ವೇಳೆ ಭಾನುವಾರ ಪ್ರಯಾಣಿಕರೊಬ್ಬರಿಂದ ಟರ್ಕಿ ನೋಟುಗಳನ್ನು ಕದ್ದಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಆದರೆ ಈ ಹೇಳಿಕೆ ಬಗ್ಗೆ ಅನುಮಾನವಿದ್ದು, ತನಿಖೆ ನಡೆಸಲಾಗುತ್ತಿದೆ. ಜೇಬುಗಳ್ಳತನ ಸಂಬಂಧ ಯಾವುದಾರೂ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ಮಾಹಿತಿ ಇಲ್ಲ. ಹೀಗಾಗಿ ಆರೋಪಿಗಳು ಸುಳ್ಳು ಹೇಳುತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ